
ಕೊಲಂಬೊ – ಶ್ರೀಲಂಕಾದ ನೌಕಾಪಡೆಯು ಇತ್ತೀಚೆಗೆ ತಲೈಮನ್ನಾರ್ ಪ್ರದೇಶದಲ್ಲಿ ೪೭ ಭಾರತೀಯ ಮೀನುಗಾರರನ್ನು ಬಂಧಿಸಿ, ಅವರ ಐದು ದೋಣಿಗಳನ್ನು ವಶಪಡಿಸಿಕೊಂಡಿದೆ. ಭಾರತೀಯ ಮೀನುಗಾರರು ಶ್ರೀಲಂಕಾದ ಕಡಲ ಗಡಿಯೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸಿದ್ದಾರೆ ಎಂಬ ಆರೋಪವಿದೆ. ಬಂಧಿಸಲಾದ ಮೀನುಗಾರರನ್ನು ಮತ್ತು ವಶಪಡಿಸಿಕೊಂಡ ದೋಣಿಗಳನ್ನು ಉತ್ತರ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಲಾಗುವುದು ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರಾದ ಕಮಾಂಡರ್ ಬುದ್ಧಿಕಾ ಸಂಪತ್ ತಿಳಿಸಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವೆ ಮೀನುಗಾರರ ಸಮಸ್ಯೆ ಹಲವು ವರ್ಷಗಳಿಂದ ಇದೆ. ಶ್ರೀಲಂಕಾದ ನೌಕಾಪಡೆಯು ಹಲವು ಬಾರಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದೆ. ಕಳೆದ ತಿಂಗಳು ಜಾಫ್ನಾ ಬಳಿ ೧೨ ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು.
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !