
ಕೊಲಂಬೊ – ಶ್ರೀಲಂಕಾದ ನೌಕಾಪಡೆಯು ಇತ್ತೀಚೆಗೆ ತಲೈಮನ್ನಾರ್ ಪ್ರದೇಶದಲ್ಲಿ ೪೭ ಭಾರತೀಯ ಮೀನುಗಾರರನ್ನು ಬಂಧಿಸಿ, ಅವರ ಐದು ದೋಣಿಗಳನ್ನು ವಶಪಡಿಸಿಕೊಂಡಿದೆ. ಭಾರತೀಯ ಮೀನುಗಾರರು ಶ್ರೀಲಂಕಾದ ಕಡಲ ಗಡಿಯೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸಿದ್ದಾರೆ ಎಂಬ ಆರೋಪವಿದೆ. ಬಂಧಿಸಲಾದ ಮೀನುಗಾರರನ್ನು ಮತ್ತು ವಶಪಡಿಸಿಕೊಂಡ ದೋಣಿಗಳನ್ನು ಉತ್ತರ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಲಾಗುವುದು ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರಾದ ಕಮಾಂಡರ್ ಬುದ್ಧಿಕಾ ಸಂಪತ್ ತಿಳಿಸಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವೆ ಮೀನುಗಾರರ ಸಮಸ್ಯೆ ಹಲವು ವರ್ಷಗಳಿಂದ ಇದೆ. ಶ್ರೀಲಂಕಾದ ನೌಕಾಪಡೆಯು ಹಲವು ಬಾರಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದೆ. ಕಳೆದ ತಿಂಗಳು ಜಾಫ್ನಾ ಬಳಿ ೧೨ ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !