ತಾಲಿಬಾನ್ ವಿದೇಶಾಂಗ ಸಚಿವರ ಭೇಟಿ ಬಳಿಕ ಭಾರತದ ವಿದೇಶಾಂಗ ಸಚಿವರ ಘೋಷಣೆ

ನವದೆಹಲಿ – ಅಫ್ಘಾನಿಸ್ತಾನದಲ್ಲಿ ಭಾರತವು ತನ್ನ ರಾಯಭಾರ ಕಚೇರಿಯನ್ನು ಪುನರಾರಂಭಿಸಲಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಅಕ್ಟೋಬರ್ ೧೦ ರಂದು ತಾಲಿಬಾನ್ ಸರಕಾರದ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಅವರೊಂದಿಗೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಘೋಷಿಸಿದರು. ಕಾಬೂಲ್ನಲ್ಲಿರುವ ನಮ್ಮ ತಾಂತ್ರಿಕ ನಿಯೋಗವನ್ನು (ತಾಂತ್ರಿಕ ಪ್ರತಿನಿಧಿಗಳ) ರಾಯಭಾರ ಕಚೇರಿಯಾಗಿ ಪರಿವರ್ತಿಸಲಾಗುವುದು ಎಂದು ಸಹ ಜೈಶಂಕರ್ ಸ್ಪಷ್ಟಪಡಿಸಿದರು.
೧. ಕಾಬೂಲ್ನಲ್ಲಿ ಭಾರತದ ಅಧಿಕೃತ ರಾಯಭಾರ ಕಚೇರಿ ಇದ್ದುದರಿಂದ, ಈ ನಿಯೋಗವು ಈಗ ಸಂಪೂರ್ಣವಾಗಿ ರಾಯಭಾರ ಕಚೇರಿಯಂತೆ ಕಾರ್ಯ ನಿರ್ವಹಿಸಲಿದೆ. ಇದರಲ್ಲಿ ವೀಸಾ ನೀಡುವುದು, ಅಫ್ಘಾನ್ ಸರಕಾರದೊಂದಿಗೆ ಸಂಬಂಧಗಳನ್ನು ಕಾಪಾಡಿಕೊಳ್ಳುವುದು, ಭಾರತೀಯ ನಾಗರಿಕರಿಗೆ ಸಹಾಯ ಮಾಡುವುದು ಮುಂತಾದ ವಿಷಯಗಳು ಸೇರಿವೆ.
೨. ಅಮಿರ್ ಖಾನ್ ಮುತ್ತಾಕಿ ಅವರು ಅಕ್ಟೋಬರ್ ೯ ರಂದು ಒಂದು ವಾರದ ಪ್ರವಾಸಕ್ಕಾಗಿ ದೆಹಲಿಗೆ ಆಗಮಿಸಿದ್ದಾರೆ.
೩. ಆಗಸ್ಟ್ ೧೫, ೨೦೨೧ ರಂದು ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ, ತಾಲಿಬಾನ್ ನಾಯಕರ ಈ ಭೇಟಿಯು ಮೊದಲ ಮಂತ್ರಿಮಂಡಳದ ಮಟ್ಟದ ಪ್ರವಾಸವಾಗಿದೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !