ತಾಲಿಬಾನ್ ವಿದೇಶಾಂಗ ಸಚಿವರ ಭೇಟಿ ಬಳಿಕ ಭಾರತದ ವಿದೇಶಾಂಗ ಸಚಿವರ ಘೋಷಣೆ

ನವದೆಹಲಿ – ಅಫ್ಘಾನಿಸ್ತಾನದಲ್ಲಿ ಭಾರತವು ತನ್ನ ರಾಯಭಾರ ಕಚೇರಿಯನ್ನು ಪುನರಾರಂಭಿಸಲಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಅಕ್ಟೋಬರ್ ೧೦ ರಂದು ತಾಲಿಬಾನ್ ಸರಕಾರದ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಅವರೊಂದಿಗೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಘೋಷಿಸಿದರು. ಕಾಬೂಲ್ನಲ್ಲಿರುವ ನಮ್ಮ ತಾಂತ್ರಿಕ ನಿಯೋಗವನ್ನು (ತಾಂತ್ರಿಕ ಪ್ರತಿನಿಧಿಗಳ) ರಾಯಭಾರ ಕಚೇರಿಯಾಗಿ ಪರಿವರ್ತಿಸಲಾಗುವುದು ಎಂದು ಸಹ ಜೈಶಂಕರ್ ಸ್ಪಷ್ಟಪಡಿಸಿದರು.
೧. ಕಾಬೂಲ್ನಲ್ಲಿ ಭಾರತದ ಅಧಿಕೃತ ರಾಯಭಾರ ಕಚೇರಿ ಇದ್ದುದರಿಂದ, ಈ ನಿಯೋಗವು ಈಗ ಸಂಪೂರ್ಣವಾಗಿ ರಾಯಭಾರ ಕಚೇರಿಯಂತೆ ಕಾರ್ಯ ನಿರ್ವಹಿಸಲಿದೆ. ಇದರಲ್ಲಿ ವೀಸಾ ನೀಡುವುದು, ಅಫ್ಘಾನ್ ಸರಕಾರದೊಂದಿಗೆ ಸಂಬಂಧಗಳನ್ನು ಕಾಪಾಡಿಕೊಳ್ಳುವುದು, ಭಾರತೀಯ ನಾಗರಿಕರಿಗೆ ಸಹಾಯ ಮಾಡುವುದು ಮುಂತಾದ ವಿಷಯಗಳು ಸೇರಿವೆ.
೨. ಅಮಿರ್ ಖಾನ್ ಮುತ್ತಾಕಿ ಅವರು ಅಕ್ಟೋಬರ್ ೯ ರಂದು ಒಂದು ವಾರದ ಪ್ರವಾಸಕ್ಕಾಗಿ ದೆಹಲಿಗೆ ಆಗಮಿಸಿದ್ದಾರೆ.
೩. ಆಗಸ್ಟ್ ೧೫, ೨೦೨೧ ರಂದು ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ, ತಾಲಿಬಾನ್ ನಾಯಕರ ಈ ಭೇಟಿಯು ಮೊದಲ ಮಂತ್ರಿಮಂಡಳದ ಮಟ್ಟದ ಪ್ರವಾಸವಾಗಿದೆ.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !