ಕೇರಳ ಉಚ್ಚ ನ್ಯಾಯಾಲಯದಿಂದ ಕೇರಳ ವಕ್ಫ್ ಮಂಡಳಿಗೆ ಛೀಮಾರಿ!

ತಿರುವನಂತಪುರಂ (ಕೇರಳ) – ಮುನಂಬಮ್ನ ಭೂಮಿಯನ್ನು ವಕ್ಫ್ (ಇಸ್ಲಾಮಿಕ್ ಧಾರ್ಮಿಕ ನಿಧಿ ಭೂಮಿ) ಎಂದು ಅಧಿಸೂಚಿಸುವ ಕೇರಳ ವಕ್ಫ್ ಮಂಡಳಿಯ ನಿರ್ಧಾರವನ್ನು ಕೇರಳ ಉಚ್ಚ ನ್ಯಾಯಾಲಯ ತೀವ್ರವಾಗಿ ಟೀಕಿಸಿದೆ. ನ್ಯಾಯಾಲಯವು ಈ ನಿರ್ಧಾರವು ‘ವಕ್ಫ್ ಕಾಯ್ದೆ 1954 ಮತ್ತು 1995’ ರ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದು, ಇದನ್ನು ‘ಈ ನಿರ್ಧಾರವು ಭೂ ಕಬಳಿಕೆಯ ಪ್ರಯತ್ನವಾಗಿದೆ’ ಎಂಬ ಕಠಿಣ ಪದಗಳಲ್ಲಿ ತರಾಟೆಗೆ ತೆಗೆದುಕೊಂಡಿದೆ. ಸರಕಾರ ರಚಿಸಿದ ವಿಚಾರಣಾ ಆಯೋಗವನ್ನು ನ್ಯಾಯಾಲಯವು ಎತ್ತಿಹಿಡಿದಿದೆ. ಈ ವಿವಾದದ ಎಲ್ಲಾ ಅಂಶಗಳನ್ನು ಪರಿಶೀಲಿಸುವುದು ಈ ಆಯೋಗದ ಉದ್ದೇಶವಾಗಿದೆ.
ವಕ್ಫ್ ಮಂಡಳಿಯು ಈ ಆಸ್ತಿಯನ್ನು ‘ವಕ್ಫ್’ ಎಂದು ಘೋಷಿಸಲು ಅಗತ್ಯವಾದ ಪ್ರಕ್ರಿಯೆಯನ್ನು ಅನುಸರಿಸದೆ ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಂಡಿದೆ, ಆದರೆ ಈ ಆಸ್ತಿಯನ್ನು ಈ ಹಿಂದೆ ಆ ಪ್ರದೇಶದ ಅನೇಕ ಖರೀದಿದಾರರು ಬಳಸುತ್ತಿದ್ದರು ಮತ್ತು ಅದರಲ್ಲಿ ವಾಸಿಸುತ್ತಿದ್ದರು ಎಂದು ನ್ಯಾಯಾಲಯ ಹೇಳಿದೆ. ಈ ನಿರ್ಧಾರದಿಂದ ಆ ಭೂಮಿಯನ್ನು ಖರೀದಿಸಿದ ನಿಜವಾದ ಮಾಲೀಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದೆ. ಈ ರೀತಿಯ ಅನಿಯಂತ್ರಿತ ಘೋಷಣೆಗಳಿಗೆ ಮಾನ್ಯತೆ ನೀಡಿದರೆ, ನಾಳೆ ಯಾವುದೇ ಐತಿಹಾಸಿಕ ಅಥವಾ ಸಾರ್ವಜನಿಕ ಕಟ್ಟಡಗಳನ್ನು, ಉದಾಹರಣೆಗೆ ತಾಜ್ ಮಹಲ್, ಕೆಂಪು ಕೋಟೆ, ವಿಧಾನಸಭೆಯ ಕಟ್ಟಡ ಇಂತಹ ಯಾವುದೇ ಸ್ಥಳವನ್ನು ವಕ್ಫ್ ಎಂದು ಘೋಷಿಸಬಹುದು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ