ಭಾಜಪದ ಅಮಾನತುಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಆಗ್ರಹ

ಬೆಂಗಳೂರು – ಸರಕಾರವು ಇತ್ತೀಚೆಗೆ ತೆಗೆದುಕೊಂಡ ನಿರ್ಧಾರದ ಪ್ರಕಾರ, ಖಾಸಗಿ ಸಂಸ್ಥೆಗಳು ಮತ್ತು ಸರಕಾರೇತರ ಸಂಸ್ಥೆಗಳು ಸರಕಾರಿ ಆಸ್ತಿ, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಖಾಸಗಿ ಅಥವಾ ಸಾಂಸ್ಥಿಕ ಕಾರ್ಯಗಳಿಗಾಗಿ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ, ಸಮಾಜದ ಎಲ್ಲಾ ವರ್ಗಗಳಿಗೂ ಸಮಾನವಾಗಿ ತಟಸ್ಥತೆ ಮತ್ತು ನಿಷ್ಪಕ್ಷಪಾತವನ್ನು ಅನ್ವಯಿಸುವುದು ಅವಶ್ಯಕವಾಗಿದೆ. ಸರಿಯಾದ ಅಧಿಕೃತ ಅಧಿಕಾರಿಗಳ ಅನುಮತಿಯನ್ನು ಪಡೆಯದೆ ಜನರು ಸಾರ್ವಜನಿಕ ರಸ್ತೆಗಳು ಮತ್ತು ಸರಕಾರಿ ಆವರಣಗಳಲ್ಲಿ ನಮಾಜ್ ಮಾಡುತ್ತಿರುವುದು ಕಂಡುಬಂದಿದೆ. ಸರಕಾರವು ಅನುಮತಿಯಿಲ್ಲದೆ ನಮಾಜ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶ ನೀಡಬೇಕು ಎಂದು ಭಾಜಪದ ಅಮಾನತುಗೊಂಡ ಶಾಸಕ ಬಸವರಾಜ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಅವರು ಆ ಪತ್ರವನ್ನು ‘ಎಕ್ಸ್’ (X) ನಲ್ಲಿ ಪ್ರಸಾರ ಮಾಡಿದ್ದಾರೆ.
ಈ ಪತ್ರದಲ್ಲಿ,
೧. ಸಾರ್ವಜನಿಕ ರಸ್ತೆಗಳು ಮತ್ತು ಸರಕಾರಿ ಆವರಣಗಳಲ್ಲಿ ನಮಾಜ್ ದಂತಹ ಕೃತ್ಯಗಳಿಂದಾಗಿ ವಾಹನಗಳು ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡಚಣೆಯುಂಟಾಗುತ್ತದೆ, ಜನರಿಗೆ ಅನಾನುಕೂಲತೆ ಎದುರಾಗುತ್ತದೆ ಮತ್ತು ಪಾದಚಾರಿಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ.
೨. ಇದರಿಂದ ಭಾರತೀಯ ಸಂವಿಧಾನದ ವಿಧಿ ೧೯ ಮತ್ತು ೨೧ರ ಅಡಿಯಲ್ಲಿ ನಾಗರಿಕರಿಗೆ ದೊರೆತಿರುವ ಮುಕ್ತ ಸಂಚಾರ ಮತ್ತು ಸುರಕ್ಷತೆಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಸರಕಾರಿ ಕಚೇರಿಗಳು ಅಥವಾ ಯಾವುದೇ ಸರಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್ ಮಾಡಲು ಯಾವುದೇ ವಿಶೇಷ ಅವಕಾಶ ಇರಬಾರದು.
೩. ಸಾರ್ವಜನಿಕ ಆಸ್ತಿಯ ಮೇಲೆ ಇತರ ಸಾಂಸ್ಥಿಕ ಕಾರ್ಯಗಳಿಗೆ ನಿರ್ಬಂಧವಿದ್ದಾಗ, ಅಂತಹ ಪದ್ಧತಿಗಳಿಗೆ ಅನುಮತಿ ನೀಡುವುದು ಎಂದರೆ ಆಯ್ದ ಕ್ರಮವನ್ನು ಕೈಗೊಳ್ಳುವುದು ಮತ್ತು ಇದರಿಂದ ಸರಕಾರದ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ.
೪. ರಸ್ತೆಗಳು, ಕಾಲುದಾರಿಗಳು ಅಥವಾ ಸರಕಾರಿ ಆವರಣಗಳಲ್ಲಿ ಪೂರ್ವ ಅಧಿಕೃತ ಅನುಮತಿಯಿಲ್ಲದೆ ನಮಾಜ್ ಮಾಡದಂತೆ ಇಡೀ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ನನ್ನ ವಿನಮ್ರ ವಿನಂತಿ.
ಸಂಪಾದಕೀಯ ನಿಲುವುಮೂಲತಃ ಇಂತಹ ಬೇಡಿಕೆಯನ್ನು ಏಕೆ ಮಾಡಬೇಕಾಗಿದೆ? ಅನುಮತಿಯಿಲ್ಲದೆ ಯಾರೂ ಎಲ್ಲಿಯೂ ನಮಾಜ್ ಮಾಡಬಾರದು ಎಂಬುದು ಸ್ಪಷ್ಟವಿದೆ. ರಸ್ತೆಯ ಮೇಲೆ ನಮಾಜ್ ಮಾಡಲು ಯಾವುದೇ ಕಾರಣಕ್ಕೂ ಅನುಮತಿ ಸಿಗುವುದಿಲ್ಲ; ಏಕೆಂದರೆ ಅದು ಸಂಚಾರಕ್ಕಾಗಿ ಮೀಸಲಾಗಿರುತ್ತದೆ. ಆದರೂ ಯಾರಾದರೂ ನಿಯಮಗಳನ್ನು ಉಲ್ಲಂಘಿಸುತ್ತಿದ್ದರೆ, ಆಡಳಿತವು ಸ್ವತಃ ಕ್ರಮ ಕೈಗೊಳ್ಳಬೇಕು! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !