
ರಾಂಚಿ (ಜಾರ್ಖಂಡ್) – ಜಾರ್ಖಂಡ್ ಉಚ್ಚ ನ್ಯಾಯಾಲಯದಲ್ಲಿ ನ್ಯಾಯವಾದಿರ ವಾದದ ಕುರಿತು ನ್ಯಾಯಮೂರ್ತಿಗಳು ಟಿಪ್ಪಣಿ ಮಾಡಿದ ನಂತರ, ನ್ಯಾಯವಾದಿ ಮತ್ತು ನ್ಯಾಯಮೂರ್ತಿಗಳ ನಡುವೆ ವಾಗ್ವಾದ ನಡೆಯಿತು. ‘ನಾನು ನನ್ನದೇ ಆದ ರೀತಿಯಲ್ಲಿ ವಾದ ಮಂಡಿಸಬಹುದು. ಯಾವುದೇ ನ್ಯಾಯವಾದಿರಿಗೆ ಅಪಮಾನ ಮಾಡಲು ಪ್ರಯತ್ನಿಸಬೇಡಿ. ದೇಶದ ನ್ಯಾಯಾಲಯಗಳಲ್ಲಿ ವಾತಾವರಣವು ಉದ್ವಿಗ್ನವಾಗಿದೆ. ಮಿತಿ ಮೀರಬೇಡಿ. ನಾನು ೪೦ ವರ್ಷಗಳಿಂದ ವಕಾಲತ್ತು ಮಾಡುತ್ತಿದ್ದೇನೆ’, ಎಂದು ಜಾರ್ಖಂಡ್ ಉಚ್ಚ ನ್ಯಾಯಾಲಯದಲ್ಲಿನ ಓರ್ವ ನ್ಯಾಯವಾದಿರು ನ್ಯಾಯಮೂರ್ತಿಗಳಿಗೇ ಖಾರವಾಗಿ ಹೇಳಿದರು. ಅಕ್ಟೋಬರ್ ೧೬ ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿದೆ.
೧. ಅಕ್ಟೋಬರ್ ೧೬ ರಂದು ನ್ಯಾಯಮೂರ್ತಿ ರಾಜೇಶ್ ಕುಮಾರ್ ಅವರು ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸುವ ಪ್ರಕರಣದ ವಿಚಾರಣೆ ನಡೆಸುತ್ತಿದ್ದರು. ನ್ಯಾಯವಾದಿರ ಕಕ್ಷಿದಾರರ ಮನೆಯಲ್ಲಿ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದ್ದರಿಂದಾಗಿ ಉಂಟಾದ ತೊಂದರೆಯ ಬಗ್ಗೆ ತಿಳಿಸಲಾಯಿತು. ಈ ಬಗ್ಗೆ ನ್ಯಾಯಮೂರ್ತಿ ರಾಜೇಶ್ ಕುಮಾರ್ ನೀಡಿದ ನಿರ್ಧಾರವನ್ನು ನ್ಯಾಯವಾದಿರು ಒಪ್ಪಿಕೊಂಡರು. ನಂತರ ಮತ್ತೊಂದು ಪ್ರಕರಣದ ವಿಚಾರಣೆ ಪ್ರಾರಂಭವಾಯಿತು. ಆ ಸಮಯದಲ್ಲಿ ನ್ಯಾಯವಾದಿರಾದ ಮಹೇಶ್ ತಿವಾರಿ ಅವರ ವಾದ ಮಂಡನೆಯ ವಿಧಾನದ ಬಗ್ಗೆ ನ್ಯಾಯಮೂರ್ತಿಗಳು ಟಿಪ್ಪಣಿ ಮಾಡಿದ ನಂತರ ವಾಗ್ವಾದ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ನ್ಯಾಯವಾದಿ ತಿವಾರಿ ಅವರು ಮೇಲಿನ ಹೇಳಿಕೆಗಳನ್ನು ನೀಡಿದರು.
೨. ನ್ಯಾಯವಾದಿ ತಿವಾರಿ ಅವರ ವಿರುದ್ಧ ನ್ಯಾಯಾಲಯ ನಿಂದನೆ ಪ್ರಕರಣದಡಿಯಲ್ಲಿ ಕ್ರಮ ಪ್ರಾರಂಭಿಸಲಾಗಿದೆ. ಅಕ್ಟೋಬರ್ ೧೭ ರಂದು ಜಾರ್ಖಂಡ್ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ತರ್ಲೋಕ ಸಿಂಗ್ ಚೌಹಾಣ್ ಸೇರಿದಂತೆ ೫ ನ್ಯಾಯಮೂರ್ತಿಗಳ ವಿಭಾಗೀಯ ಪೀಠದ ಮುಂದೆ ವಿಚಾರಣೆ ನಡೆಯಿತು. ನ್ಯಾಯವಾದಿ ತಿವಾರಿ ಅವರಿಗೆ ೩ ವಾರಗಳಲ್ಲಿ ತಮ್ಮ ಹೇಳಿಕೆಯನ್ನು ಮಂಡಿಸಲು ಆದೇಶ ನೀಡಲಾಗಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ ೧೧ ರಂದು ನಡೆಯಲಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !