ಜಿನೇವಾ (ಸ್ವಿಟ್ಜರ್ಲೆಂಡ್) ಅಂತರ-ಸಂಸದೀಯ ಒಕ್ಕೂಟದ ಸಭೆಯಲ್ಲಿ ಪಾಕಿಸ್ತಾನವನ್ನು ತಿವಿದ ಭಾರತ!

ಜಿನೇವಾ (ಸ್ವಿಟ್ಜರ್ಲೆಂಡ್) – ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯ ಮೂಲಕ ಜಮ್ಮು-ಕಾಶ್ಮೀರವನ್ನು ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ ಮತ್ತು ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಭಾರತವು ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದೆ. ಇಲ್ಲಿ ನಡೆದ ಅಂತರ-ಸಂಸದೀಯ ಒಕ್ಕೂಟದ (‘ಇಂಟರ್ ಪಾರ್ಲಿಮೆಂಟ್ ಯೂನಿಯನ್’) ಸಭೆಯಲ್ಲಿ ಪಾಕಿಸ್ತಾನದ ಪ್ರತಿನಿಧಿಯು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದಾಗ, ಭಾರತದ ಸಂಸದೆ ಅಪರಾಜಿತಾ ಸಾರಂಗಿ ಅವರು ಈ ಪ್ರತ್ಯುತ್ತರ ನೀಡಿದರು.
ಸಂಸದೆ ಸಾರಂಗಿ ಅವರು,
1. ಈ ಸಭೆಯ ವ್ಯಾಪ್ತಿಗೆ ಬರದ ರಾಜಕೀಯ ವಿಷಯಗಳನ್ನು ಈ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರಸ್ತಾಪಿಸುವ ಪಾಕಿಸ್ತಾನವನ್ನು ನಾವು ಖಂಡಿಸುತ್ತೇವೆ. ಅವರ ಉದ್ದೇಶ ಕೇವಲ ಸುಳ್ಳು ಪ್ರಚಾರ ಮಾಡುವುದು ಮತ್ತು ಭಾರತದ ವರ್ಚಸ್ಸನ್ನು ಹಾಳುಮಾಡುವುದು ಆಗಿದೆ.
2. ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಪಾಕಿಸ್ತಾನವು ತನ್ನ ಅಕ್ರಮ ನಿಯಂತ್ರಣದಲ್ಲಿರುವ ಪ್ರದೇಶವನ್ನು ತಕ್ಷಣವೇ ತೆರವುಗೊಳಿಸಬೇಕು. ಜಮ್ಮು-ಕಾಶ್ಮೀರವು ಭಾರತದ್ದಾಗಿತ್ತು, ಭಾರತದ್ದಾಗಿದೆ ಮತ್ತು ಯಾವಾಗಲೂ ಭಾರತದ್ದೇ ಆಗಿರುತ್ತದೆ. ಪಾಕಿಸ್ತಾನವು ಈಗ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕು.
3. ಪಾಕಿಸ್ತಾನವು ಮೊದಲು ತನ್ನ ದೇಶದ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು. ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ.
4. ಪಾಕಿಸ್ತಾನವು ಭಾರತದ ಮೇಲೆ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡುತ್ತಿದೆ; ಆದರೆ ನಿಜವಾದ ಸಂಗತಿಯೆಂದರೆ, ಗಡಿಯಾಚೆಗಿನ ಭಯೋತ್ಪಾದನೆಯ ಮೂಲವೇ ಆ ದೇಶದಲ್ಲಿದೆ. ಭಾರತವು ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.
5. ಪಾಕಿಸ್ತಾನವು ನಿರಂತರವಾಗಿ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ಕಾರಣದಿಂದಾಗಿ ಭಾರತವು ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಗಲು ಸಾಧ್ಯವಿಲ್ಲ.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !