
ಮುಂಬಯಿ, ಅಕ್ಟೋಬರ್ ೨೧ (ವರದಿ) – ೯೫೦ ವರ್ಷಗಳಷ್ಟು ಪ್ರಾಚೀನ ಮತ್ತು ಭಾರತೀಯ ಪುರಾತತ್ವ ಇಲಾಖೆಯಿಂದ ಸಂರಕ್ಷಿಸಲ್ಪಟ್ಟಿರುವ ಸ್ಮಾರಕವಾಗಿರುವ ಥಾಣೆ ಜಿಲ್ಲೆಯ ಅಂಬರನಾಥದಲ್ಲಿರುವ ಶಿವಮಂದಿರಕ್ಕೆ ಬಿರುಕುಗಳು ಕಾಣಿಸಿಕೊಂಡಿವೆ. ಅನೇಕ ಸ್ಥಳಗಳಲ್ಲಿ ದೇವಾಲಯದ ಅವಶೇಷಗಳು ಒಡೆದಿವೆ, ದೇವಾಲಯದ ಮೇಲಿನ ಅನೇಕ ಶಿಲ್ಪಗಳು ಭಗ್ನಗೊಂಡಿವೆ. ಇಷ್ಟೊಂದು ದುಸ್ಥಿತಿಯಾದರೂ ಭಾರತೀಯ ಪುರಾತತ್ವ ಇಲಾಖೆಯು ಈ ದೇವಾಲಯದ ಸಂರಕ್ಷಣೆಗಾಗಿ ಯಾವುದೇ ಯೋಜನೆಯನ್ನು ಮಾಡಿಲ್ಲ. ಈ ದೇವಾಲಯವು ದೇಶದ ಪ್ರಾಚೀನ ದೇವಾಲಯಗಳಲ್ಲಿ ಒಂದಾಗಿದೆ.

‘ಸನಾತನ ಪ್ರಭಾತ’ದ ಪ್ರತಿನಿಧಿ ಶ್ರೀ. ಪ್ರೀತಮ ನಾಚಣಕರ್ ಅವರು ಮಾಹಿತಿ ಹಕ್ಕಿನ ಅಡಿಯಲ್ಲಿ ಸಲ್ಲಿಸಿದ ಅರ್ಜಿಯಿಂದಾಗಿ ಅಂಬರನಾಥ ದೇವಾಲಯದ ಸಂರಕ್ಷಣೆ ಅಥವಾ ದುರಸ್ತಿಗಾಗಿ ಪುರಾತತ್ವ ಇಲಾಖೆಯಿಂದ ಯಾವುದೇ ರೀತಿಯ ಸಮೀಕ್ಷೆಯನ್ನು ಮಾಡಲಾಗಿಲ್ಲ ಎಂಬ ಮಾಹಿತಿಯನ್ನು ಕೇಂದ್ರ ಪುರಾತತ್ವ ಇಲಾಖೆಯ ಮುಂಬಯಿಯ ವಿಭಾಗೀಯ ಕಚೇರಿಯಿಂದ ನೀಡಲಾಗಿದೆ.

ದೇವಾಲಯದ ದುಸ್ಥಿತಿ ಹೀಗಿದೆ !

ಈ ದೇವಾಲಯದ ಮೇಲೆ ಭಗವಾನ್ ಶ್ರೀವಿಷ್ಣು, ಗಣಪತಿ, ನರಸಿಂಹ ಮತ್ತು ಇತರ ದೇವತೆಗಳು ನೃತ್ಯ ಮಾಡುತ್ತಿರುವ ಶಿಲ್ಪಗಳಿವೆ. ಇವುಗಳಲ್ಲಿ ಬಹುತೇಕ ಶಿಲ್ಪಗಳು ಒಡೆದಿವೆ. ಕೆಲವು ಶಿಲ್ಪಗಳ ಶಿರಗಳು ಮುರಿದಿವೆ, ಇನ್ನೂ ಕೆಲವದರ ಅಂಗಾಂಗಗಳು ಮುರಿದಿವೆ. ಅನೇಕ ಸ್ಥಳಗಳಲ್ಲಿ ದೇವಾಲಯದ ಕೆಲವು ಭಾಗಗಳು ಒಡೆದಿವೆ. ಕಳೆದ ಹಲವು ವರ್ಷಗಳಿಂದ ಈ ದೇವಾಲಯದ ಸಂರಕ್ಷಣೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಪ್ರಸ್ತುತ ಈ ದೇವಾಲಯದ ಸ್ಥಿತಿ ಅತ್ಯಂತ ಬಿಗಡಾಯಿಸಿದೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ