ಕಾಸ್ಗಂಜ್ (ಉತ್ತರ ಪ್ರದೇಶ): ಇಲ್ಲಿ ಹಿಂದೂ-ಮುಸ್ಲಿಮರ ನಡುವೆ ಘರ್ಷಣೆ !

  • ಎರಡೂ ಸಮುದಾಯಗಳ ನಡುವೆ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ

  • ಶಾಂತಿ ಕಾಪಾಡುವಂತೆ ಪೊಲೀಸರಿಂದ ಮನವಿ

ಕಾಸ್ಗಂಜ್ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ಸೊರೋನ್‌ನಲ್ಲಿ ನಾಲ್ಕು ಚಕ್ರದ ವಾಹನ ನಿಲ್ಲಿಸುವ ವಿಚಾರವಾಗಿ ವಿವಾದ ಪ್ರಾರಂಭವಾಯಿತು. ಈ ವಿವಾದವು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಕಲ್ಲು ತೂರಾಟ ಮತ್ತು ಗುಂಡಿನ ದಾಳಿಯಾಗಿ ಮಾರ್ಪಟ್ಟಿತು. ಜಿಲ್ಲಾಧಿಕಾರಿ ಪ್ರಣವ ಸಿಂಗ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಅವರು ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಅವರ ಸೂಚನೆಗಳ ಮೇರೆಗೆ ಇಡೀ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಪೊಲೀಸ್ ತಂಡಗಳು ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ನಾಗರಿಕರೊಂದಿಗೆ ಸಂವಾದ ನಡೆಸಿ, ಸಮಾಜದಲ್ಲಿ ಐಕ್ಯತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜನರಿಗೆ ಭರವಸೆ ನೀಡಿದ್ದಾರೆ.