|

ಚಿಕ್ಕಬಳ್ಳಾಪುರ – ಮೆಕ್ಕೆಜೋಳ ಖರೀದಿಸುವ ಒಬ್ಬ ಉದ್ಯಮಿಯ 89 ಲಕ್ಷ ರೂಪಾಯಿಗಳ ವಂಚನೆ ಮಾಡಿದ ಪ್ರಕರಣದಲ್ಲಿ 3 ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಅವರು ಪೊಲೀಸ್ ಉಪನಿರೀಕ್ಷಕರೊಂದಿಗೆ ದೂರವಾಣಿಯಲ್ಲಿ ನಡೆಸಿದ ಸಂಭಾಷಣೆಯ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಸಚಿವ ಅಹ್ಮದ್ ಅವರು ಆರೋಪಿಗಳನ್ನು ಬಿಟ್ಟು ಬಿಡುವಂತೆ ಹೇಳಿದ್ದಾರೆ.
1. ಆರ್ಥಿಕ ವಂಚನೆಯ ಸಂಬಂಧ ಉದ್ಯಮಿ ರಾಮಕೃಷ್ಣ ಅವರು ನಾಸೀರ್, ಅಬ್ದುಲ್ ರಜಾಕ್ ಮತ್ತು ಅಕ್ಬರ್ ಪಾಷಾ ಅವರ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೇರಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
2. ಪೇರಸಂದ್ರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಜಗದೀಶ್ ಅವರಿಗೆ ಸಚಿವ ಜಮೀರ್ ಅಹ್ಮದ್ ಅವರು ದೂರವಾಣಿ ಕರೆ ಮಾಡಿ, “ಅವರು (ಆರೋಪಿಗಳು) ನನಗೆ ತುಂಬಾ ಬೇಕಾದವರು. ಹಾಗಾಗಿ ಈ ಪ್ರಕರಣದಲ್ಲಿ ಸ್ವಲ್ಪ ಸಹಾಯ ಮಾಡಿ ಆರೋಪಿಗಳನ್ನು ಬಿಟ್ಟುಬಿಡಿ” ಎಂದು ಹೇಳಿದರು. ಅದಕ್ಕೆ ಪೊಲೀಸ್ ಉಪನಿರೀಕ್ಷಕ ಜಗದೀಶ್ ಅವರು ಎರಡೂ ಕಡೆಯ ಜನರನ್ನು ಪೊಲೀಸ್ ಠಾಣೆಗೆ ಕರೆಸಿ ಪ್ರಕರಣ ಇತ್ಯರ್ಥಪಡಿಸುವಂತೆ ಹೇಳಿದರು.
ಸಂಪಾದಕೀಯ ನಿಲುವುಆರೋಪಿಗಳನ್ನು ಬೆಂಬಲಿಸುವ ಇಂತಹ ಕಾಂಗ್ರೆಸ್ ಸಚಿವರು ರಾಜ್ಯದಲ್ಲಿ ಕಾನೂನಿನ ಆಡಳಿತವನ್ನು ಹೇಗೆ ತರಲು ಸಾಧ್ಯ? ಸಚಿವರೇ ಆರೋಪಿಗಳನ್ನು ಬಿಡಲು ಹೇಳುತ್ತಿದ್ದರೆ, ರಾಜ್ಯದಲ್ಲಿನ ಅಪರಾಧದ ಪ್ರಮಾಣ ಎಂದಿಗೂ ಇಳಿಯುವುದಿಲ್ಲ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!