ಹಾಗಾದರೆ ವಕ್ಫ್ ಮಂಡಳಿಯು ಕಾನೂನಿಗಿಂತ ದೊಡ್ಡದೇ? ಎಂಬ ಪ್ರಶ್ನೆಯನ್ನು ಖರ್ಗೆಯವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಕೇಳಲಾಗುತ್ತಿದೆ!

ಬೆಂಗಳೂರು – ಏನೇ ಆದರೂ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾನೂನಿಗಿಂತ ದೊಡ್ಡದಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ದೃಢವಾಗಿ ಹೇಳಿದ್ದಾರೆ. ಯಾರಿಗೂ ವಿಶೇಷ ಹಕ್ಕು ಇರಲು ಸಾಧ್ಯವಿಲ್ಲ. ಈ ದೇಶದ ಕಾನೂನನ್ನು ಪಾಲಿಸಿ, ಇಷ್ಟನ್ನೇ ನಾನು ಸಂಘಕ್ಕೆ ಹೇಳುತ್ತಿದ್ದೇನೆ, ಎಂದು ಅವರು ಒಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಿಯಾಂಕ್ ಖರ್ಗೆ ಅವರ ಮೇಲೆ ಟೀಕೆ ವ್ಯಕ್ತವಾಗುತ್ತಿದೆ. ಹಾಗಾದರೆ ಇದೇ ನಿಯಮ ವಕ್ಫ್ ಮಂಡಳಿಗೂ ಅನ್ವಯಿಸುವುದಿಲ್ಲವೇ? ವಕ್ಫ್ ಮಂಡಳಿ ಕಾನೂನಿಗಿಂತ ದೊಡ್ಡದೇ? ವಕ್ಫ್ ಮಂಡಳಿಯ ವಿಷಯದಲ್ಲಿ ನಿಮ್ಮ ನಿಲುವು ಹೀಗೇಕಿಲ್ಲ? ಎಂಬ ಪ್ರಶ್ನೆಗಳನ್ನು ಖರ್ಗೆಯವರಿಗೆ ಕೇಳಲಾಗುತ್ತಿದೆ. ಸಂಘದ ಸಾರ್ವಜನಿಕ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಖರ್ಗೆ ಕೆಲವು ದಿನಗಳ ಹಿಂದೆ ಬೇಡಿಕೆ ಇಟ್ಟಿದ್ದರು.
ಸಂಪಾದಕೀಯ ನಿಲುವುಈ ದೇಶದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಹಾಗಿದ್ದರೂ ಕಾಂಗ್ರೆಸ್ ಆಡಳಿತದಲ್ಲಿ ಗಾಂಧಿ ಕುಟುಂಬ ಯಾವಾಗಲೂ ಕಾನೂನಿಗಿಂತ ದೊಡ್ಡದಾಗಿದೆ! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!