|

ನವ ದೆಹಲಿ – ಬೀದಿ ನಾಯಿಗಳ ಸಮಸ್ಯೆ ಬಗ್ಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಕಳುಹಿಸಲಾಗಿತ್ತು. ಆದಾಗ್ಯೂ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ. ನಿಮ್ಮ ಅಧಿಕಾರಿಗಳು ವೃತ್ತಪತ್ರಿಕೆಗಳನ್ನು ಓದುವುದಿಲ್ಲವೇ ಅಥವಾ ಸಾಮಾಜಿಕ ಮಾಧ್ಯಮಗಳನ್ನು ನೋಡುವುದಿಲ್ಲವೇ? ಎಲ್ಲೆಡೆ ಈ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿತ್ತು. ವಿಶ್ವದಲ್ಲಿ ಭಾರತದ ಘನತೆಗೆ ಧಕ್ಕೆಯಾಗುತ್ತಿದೆ. ಈ ವಿಷಯ ಅಧಿಕಾರಿಗಳಿಗೆ ತಿಳಿದಿದ್ದರೂ ಅವರು ಮುಂದಾಳತ್ವ ವಹಿಸಲಿಲ್ಲ. ಈಗ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ನವೆಂಬರ್ ೩ ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು, ಇಲ್ಲದಿದ್ದರೆ ನಾವೇ ನ್ಯಾಯಾಲಯವನ್ನು ವಿಧಾನಸಭೆ ಸಭಾಂಗಣದಲ್ಲಿ ನಡೆಸುತ್ತೇವೆ, ಎಂದು ಸರ್ವೋಚ್ಚ ನ್ಯಾಯಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ತರಾಟೆಗೆ ತೆಗೆದುಕೊಂಡಿತು. ಬೀದಿ ನಾಯಿಗಳ ಪ್ರಕರಣದಲ್ಲಿ ರಾಜ್ಯಗಳಿಂದ ಇನ್ನೂ ಪ್ರಮಾಣಪತ್ರ ಸಲ್ಲಿಸದ ಕಾರಣ ಸರ್ವೋಚ್ಚ ನ್ಯಾಯಾಲಯವು ಈ ರೀತಿ ಅಸಮಾಧಾನ ವ್ಯಕ್ತಪಡಿಸಿತು. ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಪ್ರಮಾಣಪತ್ರ ಸಲ್ಲಿಸಿರುವುದರಿಂದ ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಜರಾಗಬೇಕಾಗಿಲ್ಲ. ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಎಲ್ಲ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿತ್ತು. ಅದೇ ವೇಳೆ ದೆಹಲಿ-ಎನ್ಸಿಆರ್ನಲ್ಲಿ (ನ್ಯಾಷನಲ್ ಕ್ಯಾಪಿಟಲ್ ರೀಜನ್ – ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ಬೀದಿ ನಾಯಿಗಳನ್ನು ಹಿಡಿದು ಅವುಗಳ ಸಂತಾನಹರಣ ಮತ್ತು ಲಸಿಕೆ ನೀಡಿ ಪುನಃ ಬಿಡುವಂತೆ ನಿರ್ದೇಶನ ನೀಡಿತ್ತು.
.. ಇಲ್ಲದಿದ್ದರೆ ದಂಡ ವಿಧಿಸಲಾಗುವುದು!
ನ್ಯಾಯಮೂರ್ತಿಗಳು ವಿಶೇಷವಾಗಿ ದೆಹಲಿ ಸರಕಾರವನ್ನು ಪ್ರಶ್ನಿಸಿದರು. ದೆಹಲಿ ಇನ್ನೂ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ ಏಕೆ? ಮುಖ್ಯ ಕಾರ್ಯದರ್ಶಿ ಇದಕ್ಕೆ ಸ್ಪಷ್ಟನೆ ನೀಡಬೇಕು, ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಮತ್ತು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳು ಖಡಕ್ ಆಗಿ ಹೇಳಿದರು.
ನಾಯಿಗಳ ದಾಳಿ ದೇಶದ ಘನತೆಗೆ ಧಕ್ಕೆ ತರುತ್ತವೆ!
ಆಗಸ್ಟ್ ನಲ್ಲಿ ನೀಡಿದ ಆದೇಶದ ನಂತರ ದೇಶಾದ್ಯಂತ ಬೀದಿ ನಾಯಿಗಳ ದಾಳಿಯ ಹಲವು ಘಟನೆಗಳು ನಡೆದಿವೆ. ಚಿಕ್ಕ ಮಕ್ಕಳ ಮೇಲಾಗುತ್ತಿರುವ ದಾಳಿಗಳು ಆತಂಕಕಾರಿಯಾಗಿವೆ. ಇತ್ತೀಚೆಗೆ ಪುಣೆಯಲ್ಲಿ ಒಬ್ಬ ಹುಡುಗನ ಮೇಲೆ ನಾಯಿ ದಾಳಿ ಮಾಡಿದೆ, ಅದಕ್ಕೂ ಮೊದಲು ಒಬ್ಬ ಹುಡುಗಿಯ ಮೇಲೂ ಇದೇ ರೀತಿ ದಾಳಿ ನಡೆದಿತ್ತು ಮತ್ತು ಕೆಲ ದಿನಗಳ ಹಿಂದೆ ಭಂಡಾರಾ ಜಿಲ್ಲೆಯಲ್ಲಿ ೨೦ ನಾಯಿಗಳು ದಾಳಿ ಮಾಡಿರುವುದು ವರದಿಯಾಗಿದೆ. ಈ ಘಟನೆಗಳಿಂದ ದೇಶದ ಅಂತಾರಾಷ್ಟ್ರೀಯ ಘನತೆ ಮಲೀನವಾಗುತ್ತಿದೆ. ಇನ್ನೂ ರಾಜ್ಯ ಸರಕಾರಗಳಿಂದ ಪ್ರಮಾಣಪತ್ರ ಸಲ್ಲಿಕೆಯಾಗಿಲ್ಲ. ೨ ತಿಂಗಳು ಕಳೆದರೂ ಉತ್ತರ ನೀಡಿಲ್ಲ ಎಂದು ಈ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿತು.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !