|

ಬೆಂಗಳೂರು – ಕರ್ನಾಟಕ ಸರಕಾರವು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿ, ಖಾಸಗಿ ಸಂಸ್ಥೆಗಳು ಸರಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು, ರಸ್ತೆಗಳು ಇತ್ಯಾದಿಗಳಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿತ್ತು. ಈಗ, ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠವು ಸರಕಾರದ ಈ ಆದೇಶಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17 ರವರೆಗೆ ಮುಂದೂಡಿದೆ. ರಾಜ್ಯ ಸರಕಾರದ ಈ ಆದೇಶದ ವಿರುದ್ಧ ‘ಪುನಶ್ಚೈತನ್ಯ ಸೇವಾ ಸಂಸ್ಥೆ’ಯು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ಸರಕಾರದ ಈ ಆದೇಶವು ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಿದಂತೆ.
ಸಂಸ್ಥೆಯ ಪರವಾಗಿ ಹಿರಿಯ ವಕೀಲರಾದ ಅಶೋಕ ಹಾರನಹಳ್ಳಿ ಅವರು ವಾದ ಮಾಡಿದರು. ಸರಕಾರದ ಆದೇಶವು ಭಾರತೀಯ ಸಂವಿಧಾನದಲ್ಲಿ ನೀಡಲಾದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಿದಂತಿದೆ ಎಂದು ಹೇಳಿದರು. ಸರಕಾರದ ಆದೇಶದ ಪ್ರಕಾರ, 10ಕ್ಕಿಂತ ಹೆಚ್ಚು ಜನರು ಒಗ್ಗೂಡಲು ಸಹ ಸರಕಾರದ ಅನುಮತಿ ಪಡೆಯಬೇಕು, ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಉದ್ಯಾನವನದಲ್ಲಿ ಒಂದು ಕಾರ್ಯಕ್ರಮ ನಡೆಸಿದರೂ ಸಹ, ಈ ಆದೇಶ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸುತ್ತದೆ. ಪೊಲೀಸ್ ಕಾನೂನುಗಳು ಈಗಾಗಲೇ ಜಾರಿಯಲ್ಲಿರುವಾಗ, ಇಂತಹ ಆಡಳಿತಾತ್ಮಕ ಆದೇಶವನ್ನು ಹೊರಡಿಸುವ ಅಗತ್ಯವೇನಿತ್ತು? ಸರಕಾರ ಇಂತಹ ಆದೇಶಗಳನ್ನು ಹೊರಡಿಸಲು ಸಾಧ್ಯವಿಲ್ಲ.
ಇದಕ್ಕೆ ರಾಜ್ಯ ಸರಕಾರದ ಪರವಾಗಿ ಹಾಜರಿದ್ದ ನ್ಯಾಯವಾದಿಗಳು ಪ್ರತ್ಯುತ್ತರ ನೀಡಲು ಒಂದು ದಿನದ ಕಾಲಾವಕಾಶ ಕೇಳಿದರು. ಪೀಠವು ಸರಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ, ಈ ಆದೇಶದ ಮೂಲಕ ಕರ್ನಾಟಕ ಸರಕಾರವು ಭಾರತೀಯ ಸಂವಿಧಾನದ ಕಲಂ 19(2)(ಎ) ಮತ್ತು 19(1)(ಬಿ) ಅಡಿಯಲ್ಲಿ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟಿತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !