ಜಾವೇದ್ ವಿರುದ್ಧ ದೂರು ದಾಖಲು !

ಮುಂಬಯಿ – ಭಾಜಪ ನಾಯಕಿ ಮತ್ತು ಮಾಜಿ ಸಂಸದೆ ಸೌ. ನವನೀತ್ ರಾಣಾ ಅವರ ವಿಳಾಸಕ್ಕೆ ಜಾವೇದ್ ಎಂಬ ವ್ಯಕ್ತಿಯು ಬೆದರಿಕೆ ಪತ್ರವನ್ನು ಕಳುಹಿಸಿದ್ದಾನೆ. ಅದರಲ್ಲಿ ಆತ ‘ನನ್ನ ಬಳಿ ೫೦ ಜನರ ಗ್ಯಾಂಗ್ ಇದೆ. ನಿನ್ನ ಮೇಲೆ ಗ್ಯಾಂಗ್ ರೇಪ್ (ಸಾಮೂಹಿಕ ಅತ್ಯಾಚಾರ) ಮಾಡಿ ಕೊಲ್ಲುತ್ತೇವೆ’ ಎಂದು ಬೆದರಿಕೆ ಹಾಕಿದ್ದಾನೆ. ಈ ಕುರಿತು ನವನೀತ್ ರಾಣಾ ಅವರ ಆಪ್ತ ಸಹಾಯಕರು ದೂರು ದಾಖಲಿಸಿದ್ದಾರೆ. ಅದರ ಆಧಾರದ ಮೇಲೆ ರಾಜಾಪೇಠ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ರಾಜಾಪೇಠ ಪೊಲೀಸರ ತನಿಖಾಧಿಕಾರಿಗಳು, ಪ್ರಸ್ತುತ ಪತ್ರದಲ್ಲಿನ ವಿಳಾಸ ಮತ್ತು ಅಂಚೆ ಮೊಹರನ್ನು ಪರಿಶೀಲಿಸಲಾಗುತ್ತಿದೆ. ವೇಗದ ಅಂಚೆಯ ಮೂಲಕ ಬಂದಿರುವ ಆ ಪತ್ರದ ‘ಪೋಸ್ಟಲ್ ಟ್ರೇಸಿಂಗ್’ (ಅಂಚೆಯ ಜಾಡು ಹಿಡಿಯುವುದು), ಅಂಚೆ ಅಧಿಕಾರಿಯ ದಾಖಲೆಗಳು ಮತ್ತು ಸಂಬಂಧಿಸಿದ ಅಂಚೆ ಕಚೇರಿಯ ‘ಸಿಸಿಟಿವಿ’ ಮೂಲಕ ಅದನ್ನು ಕಳುಹಿಸಿದವರನ್ನು ಪತ್ತೆ ಮಾಡಲಾಗುವುದು. ಪತ್ರದಲ್ಲಿನ ಶಾಯಿ, ಹಸ್ತಾಕ್ಷರ ಮತ್ತು ಕಾಗದದ ನ್ಯಾಯವೈಜ್ಞಾನಿಕ ವಿಶ್ಲೇಷಣೆ (ಫೊರೆನ್ಸಿಕ್ ಟೆಸ್ಟಿಂಗ್) ಗಾಗಿ ಮಾದರಿಗಳನ್ನು ಕಳುಹಿಸಲಾಗುವುದು, ಎಂದು ಹೇಳಿದ್ದಾರೆ.
ಈ ಘಟನೆಯಿಂದಾಗಿ ಸೌ. ನವನೀತ್ ರಾಣಾ ಅವರ ಭದ್ರತೆಯನ್ನು ಹೆಚ್ಚಿಸಲಾಗುವುದು. ಸಾಮಾಜಿಕ ಮತ್ತು ರಾಜಕೀಯ ನಾಯಕರು ಇಂತಹ ಬೆದರಿಕೆಗಳನ್ನು ಖಂಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಅನುಮಾನ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಾಗರಿಕರು ಮತ್ತು ಸಾರ್ವಜನಿಕ ವ್ಯಕ್ತಿಗಳಿಗೆ ಬೆದರಿಕೆ ಹಾಕುವ ಯಾವುದೇ ಘಟನೆಯ ವಿರುದ್ಧ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡುವಂತೆ ಸಹ ಮನವಿ ಮಾಡಲಾಗುತ್ತಿದೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !