
ಬರೇಲಿ (ಉತ್ತರ ಪ್ರದೇಶ) – ಸಾಮಾಜಿಕ ಮಾಧ್ಯಮಗಳ ಮೂಲಕ ಭಗವಾನ್ ಶ್ರೀರಾಮನಿಗೆ ಅವಮಾನ ಮಾಡುವ ಬರಹವನ್ನು ಪ್ರಸಾರ ಮಾಡಿದ ಅನಸ ಪಠಾಣನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬರಹ ಪ್ರಸಾರವಾದ ಕೂಡಲೇ ಹಿಂದೂ ಸಂಘಟನೆಗಳು ಮತ್ತು ಸ್ಥಳೀಯ ನಾಗರಿಕರಲ್ಲಿ ಆಕ್ರೋಶ ಉಂಟಾಗಿತ್ತು. ಅವರು ಪೊಲೀಸರ ಬಳಿ ಹಾಗೂ ಸೈಬರ್ ವಿಭಾಗದ ಬಳಿ ದೂರು ದಾಖಲಿಸಿದ್ದರು. ಪರಿಣಾಮವಾಗಿ, ಬರೇಲಿ ಪೊಲೀಸರು 24 ಗಂಟೆಗಳ ಒಳಗೆ ಪಠಾಣನನ್ನು ಬಂಧಿಸಿದರು. ಇದರ ನಂತರ ಪೊಲೀಸರು ಅನಸ ಪಠಾಣನ ಒಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ, ಅದರಲ್ಲಿ ಅವನು ಕೈಜೋಡಿಸಿ ಕ್ಷಮೆ ಕೇಳುತ್ತಿರುವುದು ಕಾಣುತ್ತದೆ.
‘ಧರ್ಮದ ಅವಮಾನವನ್ನು ಸಹಿಸಲಾಗುವುದಿಲ್ಲ!’ – ಪೊಲೀಸರು
ಪೊಲೀಸ್ ಅಧಿಕಾರಿಗಳು ಮಾತನಾಡಿ, ಯಾರಿಗೂ ಧರ್ಮ, ಸಮಾಜ ಅಥವಾ ಸಮುದಾಯದ ವಿರುದ್ಧ ಅವಮಾನಕಾರಿ ಭಾಷೆಯನ್ನು ಬಳಸುವ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಅಥವಾ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡಲು ಪ್ರಯತ್ನಿಸುವವರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಂಪಾದಕೀಯ ನಿಲುವುಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದರೆ ಪಾಕಿಸ್ತಾನದಲ್ಲಿ ಕಠಿಣ ಧರ್ಮನಿಂದನೆ ಕಾನೂನು ಇದೆ ಮತ್ತು ಅದರಲ್ಲಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಲಾಗುತ್ತದೆ. ಅದೇ ರೀತಿಯ ಕಾನೂನನ್ನು ಈಗ ಭಾರತದಲ್ಲಿ ಮಾಡುವುದು ಅವಶ್ಯಕ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!