ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಪಥಸಂಚಲನದಲ್ಲಿ ಭಾಗವಹಿಸಿದ್ದ ಸರಕಾರಿ ಅಧಿಕಾರಿಯ ಅಮಾನತು ಸ್ಥಗಿತ! : KSAT Checkmates Congress

ರಾಷ್ಟ್ರೀಯ ಸ್ವಯಂಸೇವಕ ಸಂಘದ ರೋಡ್ ಶೋನಲ್ಲಿ ಭಾಗವಹಿಸುತ್ತಿರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ (ಸುತ್ತಿನಲ್ಲಿ)

ಮಂಗಳೂರು – ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ್ದರಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ (ಕೆಎಟಿ) ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಸಂಘದ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ ೧೨ ರಂದು ಲಿಂಗಸೂಗೂರು ನಗರದಲ್ಲಿ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಪ್ರವೀಣ್ ಅವರು ಈ ಪಥಸಂಚಲನದಲ್ಲಿ ಸಂಘದ ಸ್ವಯಂಸೇವಕರ ಗಣವೇಶ ಧರಿಸಿ, ಕೈಯಲ್ಲಿ ದಂಡ ಹಿಡಿದು ಭಾಗವಹಿಸಿದ್ದರು. ಈ ಕಾರಣಕ್ಕಾಗಿ ರಾಜ್ಯ ಸರಕಾರ ಅವರನ್ನು ಅಮಾನತುಗೊಳಿಸುವ ಆದೇಶವನ್ನು ಹೊರಡಿಸಿತ್ತು.

ಅಮಾನತುಗೊಂಡ ನಂತರ ಭಾಜಪ ಸಂಸದ ತೇಜಸ್ವಿ ಸೂರ್ಯ ಅವರು ಪ್ರವೀಣ ಅವರೊಂದಿಗೆ ಚರ್ಚಿಸಿ,

ಕಾನೂನುಬಾಹಿರ ಮತ್ತು ನಿಯಮಬಾಹಿರ ಅಮಾನತಿಗೆ ಆಕ್ಷೇಪಿಸಲು ನಾನು ವೈಯಕ್ತಿಕವಾಗಿ ಸಂಬಂಧಿಸಿದ ನ್ಯಾಯಾಧೀಕರಣ ಮತ್ತು ನ್ಯಾಯಾಲಯದಲ್ಲಿ ಹಾಜರಿರುತ್ತೇನೆ ಎಂದು ಭರವಸೆ ನೀಡಿದರು.

ಸಂಪಾದಕೀಯ ನಿಲುವು

ಕರ್ನಾಟಕದ ಸಂಘ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತೀವ್ರ ಮುಖಭಂಗ !