ವಿಶ್ವ ಹಿಂದೂ ಪರಿಷತ್ತಿನ ನಾಯಕ ಶರಣ್ ಪಂಪ್‌ವೆಲ್ ಬಂಧನ : VHP Leader Sharan Pumpwell

ಆಪಾದಿತ ಪ್ರಚೋದನಕಾರಿ ಬರಹ ಪ್ರಸಾರ ಮಾಡಿದ ಆರೋಪದ ಮೇಲೆ ಕ್ರಮ

ಶರಣ್ ಪಂಪ್‌ವೆಲ್, ವಿಶ್ವ ಹಿಂದೂ ಪರಿಷತ್ ನಾಯಕ

ಮಂಗಳೂರು – ಸಾಮಾಜಿಕ ಜಾಲತಾಣಗಳಲ್ಲಿ ಆಪಾದಿತ ಪ್ರಚೋದನಕಾರಿ ಬರಹ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ (ವಿ.ಹಿಂ.ಪ.) ನಾಯಕ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶರಣ್ ಪಂಪ್‌ವೆಲ್ ಅವರಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಲಾಗಿದೆ.

ಅವರ ವಿರುದ್ಧ ‘ಸೊಮೋಟೋ’ (ಪೊಲೀಸರು ತಾವಾಗಿಯೇ ಮೊಕದ್ದಮೆ ದಾಖಲಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶರಣ್ ಪಂಪ್‌ವೆಲ್ ಅವರನ್ನು ಬಂಧಿಸುತ್ತಿದ್ದಂತೆ ಶಾಸಕ ವೇದವ್ಯಾಸ ಕಾಮತ್ ಮತ್ತು ಭಾಜಪ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಂಪಾದಕೀಯ ನಿಲುವು

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಹಿಂದುತ್ವನಿಷ್ಠರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಭಾಜಪ ಆಡಳಿತವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಕ್ರಮ ಕೈಗೊಳ್ಳುವಂತೆ ಯಾರಾದರೂ ಒತ್ತಾಯಿಸಿದರೆ, ಅದರಲ್ಲಿ ತಪ್ಪೇನು?