(‘ಎನ್ಸಿಇಆರ್ಟಿ’ ಎಂದರೆ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ – ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ)

ನವದೆಹಲಿ – ‘ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ’ (‘ಎನ್ಸಿಇಆರ್ಟಿ’) ಯ ಶಾಲಾ ಪಠ್ಯಪುಸ್ತಕಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ – ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಮತ್ತು ಕಂಪ್ಯೂಟರ್ ತಂತ್ರಜ್ಞಾನ (ಸಿಟಿ) ವನ್ನು ಮೂರನೇ ತರಗತಿಯ ಪಠ್ಯಕ್ರಮದಲ್ಲಿ ಸೇರಿಸಲಾಗುವುದು, ಹಾಗೂ 6 ರಿಂದ 8 ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಆಯುರ್ವೇದಕ್ಕೆ ಸಂಬಂಧಿಸಿದ ಪಾಠಗಳನ್ನು ಸೇರಿಸಲಾಗುವುದು. ಈ ಬದಲಾವಣೆಗಳನ್ನು 2026-27ನೇ ಶೈಕ್ಷಣಿಕ ವರ್ಷದ ಪಠ್ಯಕ್ರಮದಿಂದ ಮಾಡಲಾಗುವುದು.
1. ಆಯುರ್ವೇದದ ಮೂಲಭೂತ ತತ್ವಗಳನ್ನು ಆರನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗುವುದು, ಇದರಲ್ಲಿ ಆಯುರ್ವೇದದ 20 ಗುಣಲಕ್ಷಣಗಳನ್ನು ಕಲಿಸಲಾಗುವುದು. ಈ ಪಾಠಗಳಲ್ಲಿ ಬಿಸಿ-ತಂಪು, ಹಗುರ-ಭಾರವಾದಂತಹ ಪರಿಕಲ್ಪನೆಗಳನ್ನು ಸಹ ಸ್ಪಷ್ಟಪಡಿಸಲಾಗುವುದು.
2. 8 ನೇ ತರಗತಿಯ ಪಠ್ಯಪುಸ್ತಕದಲ್ಲಿ ದಿನನಿತ್ಯದ ದಿನಚರಿ ಮತ್ತು ಋತುಗಳಿಗೆ ಅನುಗುಣವಾದ ಶಿಸ್ತಿನ ಕುರಿತು ಒಂದು ಅಧ್ಯಾಯವಿರಲಿದೆ. ಈ ಅಧ್ಯಾಯದ ಶೀರ್ಷಿಕೆ ‘ಆಯುರ್ವೇದ – ದೇಹ, ಮನಸ್ಸು ಮತ್ತು ಪರಿಸರದ ಸಮತೋಲನ’ ಎಂಬುದಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ