ವಿಶ್ವಸಂಸ್ಥೆಯಲ್ಲಿ ಮತ್ತೆ ಪಾಕಿಸ್ತಾನಕ್ಕೆ ತಿವಿದ ಭಾರತ

ನ್ಯೂಯಾರ್ಕ್ (ಅಮೆರಿಕ) – ಪಾಕಿಸ್ತಾನಿ ಸೈನಿಕರು ಅಕ್ರಮವಾಗಿ ವಶಪಡಿಸಿಕೊಂಡಿರುವ ಕಾಶ್ಮೀರ ಪ್ರದೇಶದಲ್ಲಿ ಜನರ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ. ಪಾಕಿಸ್ತಾನವು ಈ ಜನರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಲ್ಲಿಸಬೇಕು ಎಂದು ಭಾರತವು ವಿಶ್ವಸಂಸ್ಥೆಯಲ್ಲಿ ಆಗ್ರಹಿಸಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ಮಾತನಾಡಿ, ಕಳೆದ ಕೆಲವು ವಾರಗಳಲ್ಲಿ, ಪಾಕಿಸ್ತಾನಿ ಸೈನಿಕರು ಮತ್ತು ಅವರ ಸಹಚರರು ಕಾಶ್ಮೀರದ ತಮ್ಮ ವಶದಲ್ಲಿರುವ ಪ್ರದೇಶದಲ್ಲಿ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಪ್ರತಿಭಟಿಸುತ್ತಿರುವ ಹಲವು ಅಮಾಯಕ ನಾಗರಿಕರ ಹತ್ಯೆ ಮಾಡಿದ್ದಾರೆ. ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಿಲ್ಲಿಸಬೇಕು ಎಂದು ನಾವು ಕರೆ ನೀಡುತ್ತೇವೆ. ಅಲ್ಲಿನ ಜನರು ಪಾಕಿಸ್ತಾನದ ದಬ್ಬಾಳಿಕೆ, ಕ್ರೌರ್ಯ ಮತ್ತು ಸಂಪನ್ಮೂಲಗಳ ಅಕ್ರಮ ಬಳಕೆಯ ವಿರುದ್ಧ ಬಹಿರಂಗವಾಗಿ ದಂಗೆ ಏಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುವಿಶ್ವಸಂಸ್ಥೆಯಲ್ಲಿ ಭಾರತವು ಎಷ್ಟು ಬಾರಿ ಪಾಕಿಸ್ತಾನಕ್ಕೆ ಈ ರೀತಿ ಎಚ್ಚರಿಕೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಮತ್ತು ಮುಂದೆಯೂ ಆಗುವುದಿಲ್ಲ; ಏಕೆಂದರೆ ಪಾಕಿಸ್ತಾನಕ್ಕೆ ಶಬ್ದಗಳ ಭಾಷೆಯಲ್ಲ, ಶಸ್ತ್ರಾಸ್ತ್ರಗಳ ಭಾಷೆ ಮಾತ್ರ ಅರ್ಥವಾಗುತ್ತದೆ, ಅಲ್ಲದೇ ವಿಶ್ವಸಂಸ್ಥೆ ಕೇವಲ ಒಂದು ಬೆದರುಗೊಂಬೆಯಂತಿದ್ದು, ಅದರಿಂದ ಏನನ್ನಾದರೂ ನಿರೀಕ್ಷಿಸುವುದು ಹಾಸ್ಯಾಸ್ಪದವೇ ಆಗಿದೆ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine