ಕೇಂದ್ರ ಸರಕಾರವು ಈ ಕುರಿತು ಚಿಂತನೆ ಮಾಡಿ ಈ ಬದಲಾವಣೆ ಮಾಡಬೇಕೆಂದು ಧರ್ಮಾಭಿಮಾನಿ ಹಿಂದೂಗಳು ಬಯಸುತ್ತಾರೆ!

ನವದೆಹಲಿ – ದೆಹಲಿಯ ಹೆಸರನ್ನು ಬದಲಿಸಿ ‘ಇಂದ್ರಪ್ರಸ್ಥ’ ಎಂದು ಇಡಬೇಕು ಎಂದು ದೆಹಲಿಯ ಚಾಂದನಿ ಚೌಕ್ ಕ್ಷೇತ್ರದ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಹಾ ಅವರಿಗೆ ಪತ್ರವನ್ನೂ ಸಹ ಬರೆದಿದ್ದಾರೆ. ಇದರ ಜೊತೆಗೆ ಹಳೆ ದೆಹಲಿ ರೈಲ್ವೆ ನಿಲ್ದಾಣಕ್ಕೆ ‘ಇಂದ್ರಪ್ರಸ್ಥ ಜಂಕ್ಷನ್’ ಮತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ‘ಇಂದ್ರಪ್ರಸ್ಥ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಕರಣ ಮಾಡಬೇಕೆಂದು ಸಂಸದ ಖಂಡೇಲ್ವಾಲ್ ಅವರು ಸಲಹೆ ನೀಡಿದ್ದಾರೆ.
🏛️ BJP MP Praveen Khandelwal writes to HM Amit Shah, demanding Delhi be renamed ‘Indraprastha’ due to its ancient, cultural identity.
📜 Also seeks to rename Old Delhi station as ‘Indraprastha Jn’ and the airport as ‘Indraprastha International’.
🕉️ A move many devout Hindus… pic.twitter.com/Uq7mtk0sZ1
— Sanatan Prabhat (@SanatanPrabhat) November 2, 2025
ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಪಾಂಡವರ ಪ್ರತಿಮೆಗಳನ್ನು ಸ್ಥಾಪಿಸಬೇಕೆಂದು ಕೂಡ ಖಂಡೇಲ್ವಾಲ್ ಅವರು ಬೇಡಿಕೆ ಇಟ್ಟಿದ್ದಾರೆ. ಇದರಿಂದ ಯುವ ಪೀಳಿಗೆಗೆ ತಮ್ಮ ಸಂಸ್ಕೃತಿಯನ್ನು ಕಲಿಯಲು ಸಹಾಯವಾಗುತ್ತದೆ ಎಂದವರು ಹೇಳಿದ್ದಾರೆ.
ಖಂಡೇಲ್ವಾಲ್ ಅವರು ತಮ್ಮ ಮನವಿ ಪತ್ರದಲ್ಲಿ ಬರೆದಿರುವ ಅಂಶಗಳು,
೧. ಭಾರತದ ಪ್ರಾಚೀನ ಸಾಂಸ್ಕೃತಿಕ ಪರಂಪರೆಯಲ್ಲಿ ದೆಹಲಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಮಹಾನಗರವಲ್ಲ, ಆದರೆ ಭಾರತೀಯ ಸಂಸ್ಕೃತಿಯ ಆತ್ಮ, ಧರ್ಮ, ನೈತಿಕತೆ ಮತ್ತು ಸಾರ್ವಜನಿಕ ಕಲ್ಯಾಣದ ಪರಂಪರೆಯ ಕೇಂದ್ರವಾಗಿ ಉಳಿದಿದೆ.
೨. ದೆಹಲಿಯ ಇತಿಹಾಸವು ನೇರವಾಗಿ ಪಾಂಡವರ ಕಾಲಕ್ಕೆ ಸಂಬಂಧಿಸಿದೆ ಮತ್ತು ಅದಕ್ಕಾಗಿಯೇ ದೆಹಲಿಯ ಭವ್ಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳು ಇಂದ್ರಪ್ರಸ್ಥ ಹೆಸರಿನೊಂದಿಗೆ ಆಳವಾದ ಸಂಬಂಧ ಹೊಂದಿವೆ.
೩. ಮಹಾಭಾರತದ ಸಮಯದಲ್ಲಿ ಪಾಂಡವರು ಯಮುನಾ ನದಿಯ ದಡದಲ್ಲಿ ತಮ್ಮ ರಾಜಧಾನಿಯನ್ನು ಇಂದ್ರಪ್ರಸ್ಥದಲ್ಲಿ ಸ್ಥಾಪಿಸಿದ್ದರು ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ.
೪. ಮೌರ್ಯರ ಕಾಲದಿಂದ ಗುಪ್ತರ ಕಾಲದವರೆಗೆ ಇಂದ್ರಪ್ರಸ್ಥವು ವ್ಯಾಪಾರ, ಸಂಸ್ಕೃತಿ ಮತ್ತು ಆಡಳಿತದ ಪ್ರಮುಖ ಕೇಂದ್ರವಾಗಿತ್ತು. ೧೧ನೇ-೧೨ನೇ ಶತಮಾನಗಳಲ್ಲಿ ರಜಪೂತ ಕಾಲದಲ್ಲಿ ತೋಮರ ರಾಜರು ಈ ಪ್ರದೇಶವನ್ನು ‘ದಿಲ್ಲಿಕಾ’ ಎಂದು ಕರೆದರು, ಆ ಬಳಿಕ ‘ದಿಲ್ಲಿ’ ಎಂಬ ಹೆಸರು ಬಂತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!