ತೆಲಂಗಾಣದಲ್ಲಿ ಭೀಕರ ಅಪಘಾತ: ೨೦ ಸಾವು!

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನವೆಂಬರ್ ೩ ರಂದು, ಭಾಗ್ಯನಗರ-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಜೆಲ್ಲಿ ಕಲ್ಲಿನ ಡಂಪರ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ೨೦ ಜನರು ಮೃತಪಟ್ಟಿದ್ದು, ೨೦ ಜನರು ಗಾಯಗೊಂಡಿದ್ದಾರೆ. ವರದಿಯ ಪ್ರಕಾರ, ಬಸ್ ತಂದೂರುನಿಂದ ಭಾಗ್ಯನಗರಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದರು. ಅವರು ಭಾನುವಾರದ ರಜೆಗಾಗಿ ಮನೆಗೆ ಹೋಗಿದ್ದರು ಮತ್ತು ಕಾಲೇಜಿಗೆ ಹೋಗಲು ಭಾಗ್ಯನಗರಕ್ಕೆ ಹಿಂತಿರುಗುತ್ತಿದ್ದರು. ಟ್ರಕ್‌ನ ಡಿಕ್ಕಿ ಎಷ್ಟು ಪ್ರಬಲವಾಗಿತ್ತು ಎಂದರೆ, ಬಸ್‌ಗೆ ಭಾರಿ ಹಾನಿಯಾಗಿದ್ದು, ಟ್ರಕ್‌ನಲ್ಲಿದ್ದ ಕಲ್ಲುಗಳು ಬಸ್‌ನ ಪ್ರಯಾಣಿಕರ ಮೇಲೆ ಬಿದ್ದವು. ಅಪಘಾತದ ಮಾಹಿತಿ ದೊರೆತ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಕಲ್ಲುಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡವರನ್ನು ಹೊರತೆಗೆಯಲು ರಕ್ಷಣಾ ಕಾರ್ಯ ಕೈಗೊಳ್ಳಲಾಯಿತು. ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.