ಕೊಯಮತ್ತೂರು (ತಮಿಳುನಾಡು) ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ವಿದ್ಯಾರ್ಥಿನಿಯ ಅಪಹರಣ ಮತ್ತು ಸಾಮೂಹಿಕ ಬಲಾತ್ಕಾರ – Coimbatore Rape Case

ಕೊಯಮತ್ತೂರು (ತಮಿಳುನಾಡು) – ಇಲ್ಲಿನ ವಿಮಾನ ನಿಲ್ದಾಣದಿಂದ 1 ಕಿ.ಮೀ. ದೂರದಲ್ಲಿ ಮೂವರು ಜನರು ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಬಲಾತ್ಕಾರ ಎಸಗಿರುವ ಘಟನೆ ನವೆಂಬರ್ 2 ರ ರಾತ್ರಿ ನಡೆದಿದೆ. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಕುಳಿತಿದ್ದಾಗ ಆರೋಪಿಗಳು ಅಲ್ಲಿಗೆ ಬಂದು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ, ಬಲವಂತವಾಗಿ ವಿದ್ಯಾರ್ಥಿನಿಯನ್ನು ವಾಹನದಿಂದ ಹೊರಗೆ ಎಳೆದು ದ್ವಿಚಕ್ರ ವಾಹನದಲ್ಲಿ ಅಪಹರಿಸಿದ್ದಾರೆ. ನಂತರ ಅವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಮಂತ್ರಿ ಸ್ಟಾಲಿನ್‌ ಗೆ ನಾಚಿಕೆಯಾಗಬೇಕು !- ಭಾಜಪ

ಸ್ಟಾಲಿನ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಾಗಿವೆ ಮತ್ತು ಅಪರಾಧಿಗಳಿಗೆ ಕಾನೂನಿನ ಭಯ ಕಡಿಮೆಯಾಗಿದೆ. ಮಂತ್ರಿಗಳಿಂದ ಅಧಿಕಾರಿಗಳವರೆಗೆ ಅಪರಾಧಿಗಳನ್ನು ರಕ್ಷಿಸುವ ಪ್ರವೃತ್ತಿ ಇದೆ. ಜನರನ್ನು ರಕ್ಷಿಸುವ ಬದಲು, ಟೀಕಿಸುವವರನ್ನು ಹತ್ತಿಕ್ಕಲು ಪೊಲೀಸರನ್ನು ಬಳಸಲಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಈ ಪರಿಸ್ಥಿತಿಯ ಬಗ್ಗೆ ನಾಚಿಕೆಯಾಗಬೇಕು ಎಂದು ಭಾಜಪ ನಾಯಕ ಕೆ. ಅಣ್ಣಾಮಲೈ ಟೀಕಿಸಿದ್ದಾರೆ.

ಸಂಪಾದಕೀಯ ನಿಲುವು

ಅತ್ಯಾಚಾರಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸುವ ಶಿಕ್ಷೆಯನ್ನು ನೀಡುವವರೆಗೆ ಇಂತಹ ಘಟನೆಗಳು ನಿಲ್ಲುವುದು ಕಷ್ಟ!