
ಕಾನ್ಪುರ (ಉತ್ತರಪ್ರದೇಶ) – ನಗರದ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಋಷಿಕಾಂತ್ ಶುಕ್ಲಾ ಅವರನ್ನು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣದಲ್ಲಿ ವಜಾ ಮಾಡಲಾಗಿದೆ. ಅವರು ಕೇವಲ 10 ವರ್ಷಗಳಲ್ಲಿ 100 ಕೋಟಿ ರೂಪಾಯಿಗಳ ಆಸ್ತಿಯನ್ನು ಸಂಗ್ರಹಿಸಿದ್ದರು. ಈ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದ್ದು, ಶುಕ್ಲಾ ಅವರ ಆಸ್ತಿ 200 ರಿಂದ 300 ಕೋಟಿ ರೂಪಾಯಿಗಳಷ್ಟಿರಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಶುಕ್ಲಾ ಅವರ ತನಿಖೆಗಾಗಿ ವಿಶೇಷ ತನಿಖಾ ದಳವನ್ನು (SIT) ಸ್ಥಾಪಿಸಲಾಗಿದೆ.
ಋಷಿಕಾಂತ್ ಶುಕ್ಲಾ ಅವರು 1998 ರಿಂದ 2009 ರ ಅವಧಿಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ (ಪಿಎಸ್ಐ) ಕಾರ್ಯನಿರ್ವಹಿಸಿದ್ದರು. ವಿಶೇಷವಾಗಿ ಅವರು ಕಾನ್ಪುರದಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಅವರು ಭ್ರಷ್ಟಾಚಾರದ ಮೂಲಕ ಆಸ್ತಿ ಗಳಿಸಿದ್ದರು. ಈ ಆಸ್ತಿಯು ಅವರ ಹೆಸರಿನಲ್ಲಿ, ಕುಟುಂಬ ಸದಸ್ಯರ ಹೆಸರಿನಲ್ಲಿ, ಆಪ್ತರು ಮತ್ತು ಪಾಲುದಾರರ ಹೆಸರಿನಲ್ಲಿದೆ. (ಇವರೆಲ್ಲರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರಿಗೆ ಜೀವಾವಧಿ ಶಿಕ್ಷೆಯಾಗಿ ಜೈಲಿನಲ್ಲಿ ಕಲ್ಲು ಒಡೆಯುವ ಶಿಕ್ಷೆ ವಿಧಿಸಬೇಕು! – ಸಂಪಾದಕರು) ಶುಕ್ಲಾ ಅವರಿಗೆ ಅಖಿಲೇಶ್ ದುಬೆ ಎಂಬ ಅಪರಾಧಿಯೊಂದಿಗೆ ಸಂಬಂಧವಿರುವುದು ಸಹ ಆರಂಭಿಕ ತನಿಖೆಯಿಂದ ತಿಳಿದು ಬಂದಿದೆ.
ಸಂಪಾದಕೀಯ ನಿಲುವುಇಂತಹವರನ್ನು ವಜಾ ಮಾಡಿ ಏನು ಪ್ರಯೋಜನ, ಇಂತವರಿಗೆ ಗಲ್ಲು ಶಿಕ್ಷೆಯಾಗಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!