ಸಿಂಧೂ ನದಿ ನೀರು ಒಪ್ಪಂದದ ಬಗ್ಗೆ ಪಾಕಿಸ್ತಾನದ ಅಧ್ಯಕ್ಷರ ವಾಗ್ದಾಳಿ

ದೋಹಾ (ಕತಾರ್) – ಭಾರತವು ನೀರನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಇಲ್ಲಿ ನಡೆದ ಜಾಗತಿಕ ಶೃಂಗಸಭೆಯಲ್ಲಿ ಆರೋಪಿಸಿದ್ದಾರೆ. ‘ಸಿಂಧೂ ನದಿ ನೀರು ಒಪ್ಪಂದವನ್ನು ಪದೇ ಪದೇ ಉಲ್ಲಂಘಿಸಲಾಗುತ್ತಿದ್ದು, ಇದರಿಂದ ಪಾಕಿಸ್ತಾನದ 24 ಕೋಟಿ ಜನರ ಜೀವ ಅಪಾಯದಲ್ಲಿದೆ,’ ಎಂದು ಅವರು ಹೇಳಿದ್ದಾರೆ. ಶೃಂಗಸಭೆಯ ಸಮಯದಲ್ಲಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರನ್ನು ಭೇಟಿ ಮಾಡಿ, ಕಾಶ್ಮೀರದ ಮೇಲಿನ ಭದ್ರತಾ ಮಂಡಳಿಯ ನಿರ್ಣಯಗಳನ್ನು ಜಾರಿಗೆ ತರಲು ಒತ್ತಾಯಿಸಿದರು. ಗುಟೆರಸ್ ಅವರು ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆಯನ್ನು ಶ್ಲಾಘಿಸುತ್ತಾ, ಭಯೋತ್ಪಾದನೆಯ ವಿರುದ್ಧದ ಅವರ ಪ್ರಯತ್ನಗಳಿಗೆ ಬೆಂಬಲ ವ್ಯಕ್ತಪಡಿಸಿದರು. (ಭಯೋತ್ಪಾದನೆಯ ಜಾಗತಿಕ ಕೇಂದ್ರವಾಗಿರುವ ದೇಶವನ್ನು ಶ್ಲಾಘಿಸುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ಬುದ್ಧಿ ಸರಿಯಾಗಿದೆಯೇ? – ಸಂಪಾದಕರು) ಮತ್ತೊಂದೆಡೆ, ‘ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ’ಯ ಅಧ್ಯಕ್ಷ ಬಿಲಾವಲ್ ಭುಟ್ಟೋ ಅವರು, ಭಾರತದ ನೀರನ್ನು ತಡೆಹಿಡಿಯುವ ನಿರ್ಧಾರದಿಂದಾಗಿ ಪಾಕಿಸ್ತಾನದ ನಾಗರಿಕರು ತೊಂದರೆಗೆ ಸಿಲುಕಿದ್ದಾರೆ ಎಂದು ಹೇಳಿದರು.
ಭಾರತವು ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗಿನ 60 ವರ್ಷಗಳಷ್ಟು ಹಳೆಯದಾದ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತ್ತು.
ಸಂಪಾದಕೀಯ ನಿಲುವುಪಾಕಿಸ್ತಾನ ಎಷ್ಟೇ ಕೂಗಾಡಿದರೂ, ತನ್ನ ದುಷ್ಕೃತ್ಯಗಳ ಪರಿಣಾಮಗಳನ್ನು ಎದುರಿಸಲೇಬೇಕು, ಎಂಬುದನ್ನು ಅದು ಗಮನದಲ್ಲಿಡಬೇಕು! |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಸ್ಪೋರ್ಟ್ನಿಂದ ಪೌರತ್ವ ಸಾಬೀತಾಗುವುದಿಲ್ಲ! – ಕೇಂದ್ರ ಸರಕಾರ
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!