|

ಗಡಚಿರೋಲಿ – ಇಲ್ಲಿನ ಅಹೇರಿ ನಗರದ ಸಮೀಪವಿರುವ ನಾಗೇಪಲ್ಲಿಯಲ್ಲಿ ಕಳೆದ ೧೧ ವರ್ಷಗಳಿಂದ ನಡೆಯುತ್ತಿದ್ದ ಅನಧಿಕೃತ ಹಾಸ್ಟೆಲ್ನಿಂದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ೯೧ ವಿದ್ಯಾರ್ಥಿಗಳನ್ನು ರಕ್ಷಿಸಿದೆ. ೪೯ ಬಾಲಕಿಯರು ಮತ್ತು ೪೨ ಬಾಲಕರನ್ನು ಈ ಜಾಲದಿಂದ ರಕ್ಷಿಸಲಾಗಿದೆ. ಹಾಸ್ಟೆಲ್ನಲ್ಲಿ ಕ್ರಿಶ್ಚಿಯನ್ ಮತಾಂತರ ನಡೆಯುತ್ತಿರುವುದು ಬಹಿರಂಗಗೊಂಡಿದೆ. ಹಾಸ್ಟೆಲ್ನಲ್ಲಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು, “ನಮ್ಮ ಧರ್ಮ ಕ್ರಿಶ್ಚಿಯನ್ ಆಗಿದ್ದು, ನಾವು ಮತ್ತು ನಮ್ಮ ಪೋಷಕರು ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಿದ್ದೇವೆ” ಎಂದು ಹೇಳಿದ್ದಾರೆ.
‘ಫ್ರೆಂಡ್ ಮಿಷನರಿ ಪ್ರೇಯರ್ ಬ್ಯಾಂಡ್ ಚೆನ್ನೈ’ ಎಂಬ ಸಂಸ್ಥೆಯು ‘ಆಶೀರ್ವಾದ’ ಹಾಸ್ಟೆಲ್ ಅನ್ನು ನಡೆಸುತ್ತಿತ್ತು. ಈ ಹಾಸ್ಟೆಲ್ಗೆ ಸರಕಾರದ ಯಾವುದೇ ಇಲಾಖೆಯ ಮಾನ್ಯತೆ ಇರಲಿಲ್ಲ.
ಹಾಸ್ಟೆಲ್ನಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ!
ವಿದ್ಯಾರ್ಥಿಗಳು ನೀಡಿರುವ ಮಾಹಿತಿಯ ಪ್ರಕಾರ, ಹಾಸ್ಟೆಲ್ನಲ್ಲಿ ಬೆಳಗ್ಗೆ ಮತ್ತು ಸಂಜೆ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆ ನಡೆಯುತ್ತದೆ. ಪ್ರತಿ ವಿದ್ಯಾರ್ಥಿಯ ಬಳಿಯೂ ‘ಬೈಬಲ್’ ಪತ್ತೆಯಾಗಿದೆ. ಹಾಸ್ಟೆಲ್ನ ಗೋಡೆಗಳ ಮೇಲೆಯೂ ಕ್ರಿಶ್ಚಿಯನ್ ಧರ್ಮದ ಪೋಸ್ಟರ್ಗಳನ್ನು ಅಂಟಿಸಲಾಗಿತ್ತು.
ಹಾಸ್ಟೆಲ್ನಲ್ಲಿ ೧ ರಿಂದ ೪ನೇ ತರಗತಿಯ ವಿದ್ಯಾರ್ಥಿಗಳಿಂದ ತಿಂಗಳಿಗೆ ₹ ೬೦೦, ೫ ರಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಂದ ₹ ೧,೦೦೦ ಮತ್ತು ೯ ರಿಂದ ೧೨ನೇ ತರಗತಿಯ ವಿದ್ಯಾರ್ಥಿಗಳಿಂದ ₹ ೧,೨೦೦ ಪಡೆಯಲಾಗುತ್ತಿತ್ತು. (ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಲಾಗುತ್ತಿತ್ತು ಎಂಬುದರ ಕೂಡ ತನಿಖೆ ಮಾಡಬೇಕು! – ಸಂಪಾದಕರು).
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!