ಪೂ. ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿಷೇಧಿಸಿದ ಆಡಳಿತ Pujya Kadsiddheshwara Swamiji Banned

ಲಿಂಗಾಯತ ಸಂಘಟನೆಯ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣ

ಧಾರವಾಡ – ಲಿಂಗಾಯತ ಸಂಘಟನೆಯ ಸ್ವಾಮೀಜಿಗಳ ಬಗ್ಗೆ ಅವಮಾನಕರ ಭಾಷಣ ಮಾಡಿದ ಆರೋಪದ ಮೇಲೆ ಕಣೇರಿ ಮಠದ ಪೂ. ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಧಾರವಾಡ ಜಿಲ್ಲೆಗೆ ಪ್ರವೇಶಿಸಲು ಆಡಳಿತವು ನಿಷೇಧ ಹೇರಿದೆ. ಇದಕ್ಕೂ ಮೊದಲು ಇದೇ ಕಾರಣಕ್ಕಾಗಿ ಸ್ವಾಮೀಜಿಗಳಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೂ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು.

ಕಣೇರಿ ಮಠದ ಶ್ರೀಗಳು ನವೆಂಬರ್ 7 ರಂದು ಅಣ್ಣಿಗೇರಿಯ ಕಾರ್ಯಕ್ರಮಕ್ಕೆ ಧಾರವಾಡಕ್ಕೆ ಬರಬೇಕಾಗಿತ್ತು; ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಾಗತಿಕ (ವಿಶ್ವ)ಲಿಂಗಾಯತ ಮಹಾಸಭಾದ ನಾಯಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿಯ ಮೇರೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಪೂ. ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಧಾರವಾಡಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ನೀಡಿದ್ದಾರೆ.