ಜಮ್ಮು- ಕಾಶ್ಮೀರ ಕುಪ್ವಾರಾದಲ್ಲಿ 2 ಭಯೋತ್ಪಾದಕರ ಹತ್ಯೆ

ಶ್ರೀನಗರ (ಜಮ್ಮು- ಕಾಶ್ಮೀರ) – ಕುಪ್ವಾರಾ ಜಿಲ್ಲೆಯಲ್ಲಿ ಇತ್ತೀಚೆಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಗಡಿ ನಿಯಂತ್ರಣ ರೇಖೆಯ ಮೂಲಕ ನುಸುಳುವಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಭದ್ರತಾ ಪಡೆಗಳಿಗೆ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ, ಭಯೋತ್ಪಾದಕರು ಭದ್ರತಾ ಪಡೆಯ ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು ಸಹ ಗುಂಡು ಹಾರಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.