|
ಹಾಪುರ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ನವೆಂಬರ್ 10 ರ ಮುಂಜಾನೆ ಪೊಲೀಸ ಮತ್ತು ಗೋ ಕಳ್ಳಸಾಗಾಣಿಕೆದಾರರ ನಡುವೆ ನಡೆದ ಚಕಮಕಿಯಲ್ಲಿ ಆರೋಪಿ ಹಸೀನ ಸತ್ತನು. ಪೊಲೀಸರಿಗೆ ಕೆಲವು ಗೋ ಕಳ್ಳ ಸಾಗಾಣಿಕೆದಾರರು ಗೋವುಗಳ ಕಳ್ಳಸಾಗಣೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡವು ಪ್ರದೇಶವನ್ನು ಸುತ್ತುವರಿಯಿತು. ಪೊಲೀಸರನ್ನು ನೋಡಿದ ಕೂಡಲೇ ಹಸೀನ ಗುಂಡು ಹಾರಿಸಲು ಪ್ರಾರಂಭಿಸಿದನು. ಪೊಲೀಸರು ಪ್ರತ್ಯುತ್ತರವಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಆತ ಗಾಯಗೊಂಡನು. ತಕ್ಷಣವೇ ಆತನನ್ನು ಧೌಲಾನಾದ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಆತನು ಮೃತಪಟ್ಟನು.
ಹಸೀನ ಸಂಬಲ್ ಜಿಲ್ಲೆಯ ಮೈನೋಟಾ ಗ್ರಾಮದ ನಿವಾಸಿಯಾಗಿದ್ದನು. ಆತ ಕುಖ್ಯಾತ ಅಪರಾಧಿಯಾಗಿದ್ದನು. ಆತನ ವಿರುದ್ಧ ಕೊಲೆ, ಗ್ಯಾಂಗ್ ವಾರ್, ಗೋಹತ್ಯೆ ಇತ್ಯಾದಿ ಪ್ರಕರಣಗಳಲ್ಲಿ 24 ಕ್ಕೂ ಹೆಚ್ಚು ಅಪರಾಧಗಳು ದಾಖಲಾಗಿದ್ದವು. ಆತನ ಬಂಧನಕ್ಕಾಗಿ 50 ಸಾವಿರ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು.
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಮಾತ್ರ ಗೋ ಕಳ್ಳಸಾಗಾಣಿಕೆದಾರರ ವಿರುದ್ಧ ಇಂತಹ ಕಠಿಣ ಕ್ರಮ ಜರುಗುತ್ತದೆ ಎಂಬುದನ್ನು ಗಮನಿಸಬೇಕು! |

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ