ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೈಫುಲ್ಲಾ ಸೈಫ್ ಹೇಳಿಕೆ!

ಇಸ್ಲಾಮಾಬಾದ್ (ಪಾಕಿಸ್ತಾನ) – ಹಫೀಜ್ ಸಯೀದ್ ಸುಮ್ಮನೆ ಕುಳಿತಿಲ್ಲ. ಅವನು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ಆಕ್ರಮಣಕ್ಕೆ ಸಿದ್ಧತೆ ನಡೆಸುತ್ತಿದ್ದಾನೆ ಎಂದು ‘ಲಷ್ಕರ್-ಎ-ತೋಯ್ಬಾ’ದ ಕಮಾಂಡರ್ ಸೈಫುಲ್ಲಾ ಸೈಫ್ ಹೇಳಿಕೆ ನೀಡಿದ್ದಾನೆ. ಅಕ್ಟೋಬರ್ 30 ರಂದು ಪಾಕಿಸ್ತಾನದ ಖೈರ್ಪುರ ತಾಮೇವಲಿನಲ್ಲಿ ನಡೆದ ಸಭೆಯಲ್ಲಿ ಅವನು ಮಾತನಾಡುತ್ತಿದ್ದನು. ಇದರ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ‘ಲಷ್ಕರ್-ಎ-ತೋಯ್ಬಾ’ದ ಭಯೋತ್ಪಾದಕರು ಈಗಾಗಲೇ ಬಾಂಗ್ಲಾದೇಶದಲ್ಲಿ ಸಕ್ರಿಯರಾಗಿದ್ದಾರೆ ಮತ್ತು ‘ಆಪರೇಷನ್ ಸಿಂದೂರ್’ನ ಸೇಡು ತೀರಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಸೈಫ್ ಹೇಳಿಕೊಂಡಿದ್ದಾನೆ.
ಅಮೆರಿಕ ಈಗ ಪಾಕಿಸ್ತಾನದ ಜೊತೆ!
1. ಸೈಫ್, ಭಾರತ ನಮ್ಮ ಮೇಲೆ ಆಕ್ರಮಣ ಮಾಡುತ್ತಿದ್ದಾಗ ಅಮೆರಿಕ ಅವರ ಜೊತೆ ಇತ್ತು; ಆದರೆ ಇಂದು ಭಾರತಕ್ಕೆ ಯಾರೂ ಬೆಂಬಲ ನೀಡುತ್ತಿಲ್ಲ. ಈಗ ಅಮೆರಿಕ ನಮ್ಮ ಜೊತೆಗಿದೆ. ಬಾಂಗ್ಲಾದೇಶವೂ ಮತ್ತೊಮ್ಮೆ ಪಾಕಿಸ್ತಾನಕ್ಕೆ ಹತ್ತಿರವಾಗುತ್ತಿದೆ, ಎಂದು ಹೇಳಿದ್ದಾನೆ.
2. ಹಫೀಜ್ ಸಯೀದ್ ತನ್ನ ಆಪ್ತ ಸಹೋದ್ಯೋಗಿಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ್ದಾನೆ, ಅವನು ಅಲ್ಲಿನ ಯುವಕರಿಗೆ ತರಬೇತಿ ನೀಡುತ್ತಿದ್ದಾನೆ.
ಸಂಪಾದಕೀಯ ನಿಲುವುಬಾಂಗ್ಲಾದೇಶದ ವಿಷಯದಲ್ಲಿ ಭಾರತ ಎಷ್ಟರಮಟ್ಟಿಗೆ ನಿಷ್ಕ್ರಿಯವಾಗಿ ಉಳಿಯುತ್ತದೆಯೋ, ಅಷ್ಟೇ ಹೆಚ್ಚು ನಷ್ಟ ದೇಶಕ್ಕೆ ಆಗುತ್ತಾ ಹೋಗುತ್ತದೆ ಎಂಬುದು ಈ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation