ದೆಹಲಿ ಸ್ಫೋಟದ ರಾಜ್ಯದ ಕೊಂಡಿಗಳನ್ನು ಪರಿಶೀಲಿಸಲು ತಂಡದ ಪ್ರಯತ್ನ!

ಪುಣೆ – ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ನಂತರ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳವು ಎಚ್ಚೆತ್ತುಕೊಂಡಿದ್ದು, ಇಲ್ಲಿನ ಕೊಂಡ್ವಾ ಪ್ರದೇಶದಲ್ಲಿ ನವೆಂಬರ್ 11 ರಂದು ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 2 ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಇಬ್ಬರ ಗುರುತನ್ನು ಗೌಪ್ಯವಾಗಿಡಲಾಗಿದ್ದು, ವಿಚಾರಣೆ ನಡೆಯುತ್ತಿದೆ. ದೆಹಲಿ ಸ್ಫೋಟ, ಹಾಗೂ ಜಮ್ಮು ಮತ್ತು ಕಾಶ್ಮೀರ ಮತ್ತು ಫರಿದಾಬಾದ್ನಲ್ಲಿ ಸ್ಫೋಟಕಗಳ ದೊಡ್ಡ ಸಂಗ್ರಹ ಸಿಕ್ಕಿದೆ. ಆ ಸಂಬಂಧ ಮಹಾರಾಷ್ಟ್ರದಲ್ಲಿ ಏನಾದರೂ ಕೊಂಡಿಗಳು ಸಿಗುತ್ತವೆಯೇ ಎಂದು ಮಹಾರಾಷ್ಟ್ರ ಭಯೋತ್ಪಾದನಾ ವಿರೋಧಿ ದಳವು ಹುಡುಕುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ವಿವಿಧ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸುವ ಸಂಚಿನಲ್ಲಿ ಪುಣೆಯಲ್ಲಿ ಬಂಧಿಸಲಾದ ಜುಬೇರ್ ಹಂಗರಗೇಕರ್ ಎಂಬ ಕಂಪ್ಯೂಟರ್ ಇಂಜಿನಿಯರ್ಗೆ ಸಂಬಂಧಿಸಿದ ಮಾಹಿತಿ ಪಡೆಯಲು ತಂಡವು ಕೊಂಡ್ವಾದಲ್ಲಿ ಮತ್ತೆ ದಾಳಿ ನಡೆಸಿತು. ಜುಬೇರ್ ಹಂಗರಗೇಕರ್ನನ್ನು ಇತ್ತೀಚೆಗೆ ಕೊಂಡ್ವಾ ಪ್ರದೇಶದಿಂದ ತಂಡವು ಬಂಧಿಸಿತ್ತು. ಜುಬೇರ್ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಅಲ್-ಖೈದಾಗೆ ಸಂಬಂಧಿಸಿರುವ ಶಂಕೆಯಿದೆ. ಅವನಿಗೆ ದೆಹಲಿ ಬಾಂಬ್ ಸ್ಫೋಟದೊಂದಿಗೆ ಸಂಬಂಧವಿಲ್ಲ ಎಂದು ತಂಡದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸ್ವದೇಶವೇ ಸರ್ವಸ್ವ !
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ