ದೆಹಲಿ ಸ್ಫೋಟದ ರಾಜ್ಯದ ಕೊಂಡಿಗಳನ್ನು ಪರಿಶೀಲಿಸಲು ತಂಡದ ಪ್ರಯತ್ನ!

ಪುಣೆ – ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ನಂತರ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳವು ಎಚ್ಚೆತ್ತುಕೊಂಡಿದ್ದು, ಇಲ್ಲಿನ ಕೊಂಡ್ವಾ ಪ್ರದೇಶದಲ್ಲಿ ನವೆಂಬರ್ 11 ರಂದು ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 2 ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಇಬ್ಬರ ಗುರುತನ್ನು ಗೌಪ್ಯವಾಗಿಡಲಾಗಿದ್ದು, ವಿಚಾರಣೆ ನಡೆಯುತ್ತಿದೆ. ದೆಹಲಿ ಸ್ಫೋಟ, ಹಾಗೂ ಜಮ್ಮು ಮತ್ತು ಕಾಶ್ಮೀರ ಮತ್ತು ಫರಿದಾಬಾದ್ನಲ್ಲಿ ಸ್ಫೋಟಕಗಳ ದೊಡ್ಡ ಸಂಗ್ರಹ ಸಿಕ್ಕಿದೆ. ಆ ಸಂಬಂಧ ಮಹಾರಾಷ್ಟ್ರದಲ್ಲಿ ಏನಾದರೂ ಕೊಂಡಿಗಳು ಸಿಗುತ್ತವೆಯೇ ಎಂದು ಮಹಾರಾಷ್ಟ್ರ ಭಯೋತ್ಪಾದನಾ ವಿರೋಧಿ ದಳವು ಹುಡುಕುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ವಿವಿಧ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸುವ ಸಂಚಿನಲ್ಲಿ ಪುಣೆಯಲ್ಲಿ ಬಂಧಿಸಲಾದ ಜುಬೇರ್ ಹಂಗರಗೇಕರ್ ಎಂಬ ಕಂಪ್ಯೂಟರ್ ಇಂಜಿನಿಯರ್ಗೆ ಸಂಬಂಧಿಸಿದ ಮಾಹಿತಿ ಪಡೆಯಲು ತಂಡವು ಕೊಂಡ್ವಾದಲ್ಲಿ ಮತ್ತೆ ದಾಳಿ ನಡೆಸಿತು. ಜುಬೇರ್ ಹಂಗರಗೇಕರ್ನನ್ನು ಇತ್ತೀಚೆಗೆ ಕೊಂಡ್ವಾ ಪ್ರದೇಶದಿಂದ ತಂಡವು ಬಂಧಿಸಿತ್ತು. ಜುಬೇರ್ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಅಲ್-ಖೈದಾಗೆ ಸಂಬಂಧಿಸಿರುವ ಶಂಕೆಯಿದೆ. ಅವನಿಗೆ ದೆಹಲಿ ಬಾಂಬ್ ಸ್ಫೋಟದೊಂದಿಗೆ ಸಂಬಂಧವಿಲ್ಲ ಎಂದು ತಂಡದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !