‘ಭಾರತ ಎಂದಿಗೂ ‘ಹಿಂದೂ ರಾಷ್ಟ್ರ’ವಾಗುವುದಿಲ್ಲ! – ಮುಖ್ಯಮಂತ್ರಿ ಸಿದ್ದರಾಮಯ್ಯ Hindu Rastra CM Siddaramaiah

ಮೈಸೂರು – ನಮ್ಮ ದೇಶ ಬಹುತ್ವವಾದಿ ರಾಷ್ಟ್ರವಾಗಿದೆ. ಇದು ಅನೇಕ ಕಲೆಗಳು, ಸಂಸ್ಕೃತಿಗಳು, ಭಾಷೆಗಳು ಮತ್ತು ಧರ್ಮಗಳ ದೇಶವಿದೆ, ಹಾಗಾಗಿ ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. “ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಹಳ ದಿನಗಳಿಂದ ‘ಹಿಂದೂ ರಾಷ್ಟ್ರ’ ಎಂದು ಹೇಳುತ್ತಿದೆ; ಆದರೆ ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗುವುದಿಲ್ಲ”, ಎಂದೂ ಅವರು ಹೇಳಿದರು.

ಶ್ರೀರಾಮ ಮಂದಿರ ನಿರ್ಮಾಣವಾಯಿತು ಮತ್ತು 370 ನೇ ವಿಧಿಯನ್ನೂ ರದ್ದುಗೊಳಿಸಲಾಯಿತು! – ಭಾಜಪ

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾಜಪ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರು, ಹಿಂದುತ್ವ ಒಂದು ಜೀವನ ಶೈಲಿಯಾಗಿದೆ, “ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು; ಆದರೆ ಅದು ಆಯಿತು. “ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ 370 ನೇ ವಿಧಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ” ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು.

ಕೇಂದ್ರ ಸರಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದೆ. ಪಾಕಿಸ್ತಾನದ ಜನರು ರಾಹುಲ್ ಗಾಂಧಿಯವರನ್ನು ಪ್ರೀತಿಸುತ್ತಾರೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ, ಎಂದು ಹೇಳಿದರು.

ಸಂಪಾದಕೀಯ ನಿಲುವು

  • ಕಾಂಗ್ರೆಸ್‌ನವರು ಎಷ್ಟೇ ಕೂಗಾಡಿದರೂ, ಭಾರತದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದನ್ನು ತಪ್ಪಿಸಲಾಗದು!
  • ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಸೃಷ್ಟಿಯಾಗಲು ಕಾಂಗ್ರೆಸ್ ಕಾರಣ ಎಂಬುದನ್ನು ನೆನಪಿಡಿ!