ಕಾಂಗ್ರೆಸ್ಸಿನ ಬೇಡಿಕೆಯ ನಂತರ ಮಸೀದಿಗಳಿಗೆ ಭೇಟಿ ನೀಡದಿರುವ ಬಗ್ಗೆ ಪೊಲೀಸರ ಭರವಸೆ

ವಿಟ್ಲ – ಗೋಹತ್ಯಾ ನಿಷೇಧ ಕಾನೂನಿನ ಜಾಗೃತಿ ಕಾರ್ಯಕ್ರಮಕ್ಕಾಗಿ ಮಸೀದಿಯನ್ನು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ನ ಅಲ್ಪಸಂಖ್ಯಾತ ಸಮುದಾಯದ ನಾಯಕರು ಪೊಲೀಸ್ ಇಲಾಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಅಲ್ಪಸಂಖ್ಯಾತ ನಾಯಕ ಎಂ.ಎಸ್. ಮಹಮ್ಮದ್ ಅವರ ನೇತೃತ್ವದಲ್ಲಿ ನಿಯೋಗವೊಂದು ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ನಿಯೋಗವು ಪೊಲೀಸರೊಂದಿಗೆ ಚರ್ಚಿಸಿ, ಕಾನೂನುಬಾಹಿರ ಅಥವಾ ಅನೈತಿಕ ಕೃತ್ಯಗಳಲ್ಲಿ ಭಾಗಿಯಾಗುವ ಯಾರ ವಿರುದ್ಧವಾದರೂ ನಿಸ್ಸಂದೇಹವಾಗಿ ಕ್ರಮ ತೆಗೆದುಕೊಳ್ಳಿ; ಆದರೆ ಒಂದು ಸಮುದಾಯವನ್ನು ಗುರಿಯಾಗಿಸಿ ಮಸೀದಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸರಿಯಲ್ಲ. ಗೋಹತ್ಯೆ ಮತ್ತು ಮಾದಕ ವಸ್ತುಗಳ ವ್ಯಸನದ ಕುರಿತು ಪೊಲೀಸರು ಸಾರ್ವಜನಿಕ ಮಟ್ಟದಲ್ಲಿ ಜಾಗೃತಿ ಮೂಡಿಸಿದರೆ ನಮ್ಮ ಯಾವುದೇ ವಿರೋಧವಿಲ್ಲ; ಆದರೆ ಒಂದು ಸಮುದಾಯವನ್ನು ಗುರಿಯಾಗಿಸಿ ಕಾನೂನಿಗೆ ಸವಾಲು ಹಾಕುವ ಸಮಾಜಘಾತಕರಲ್ಲಿ ಧರ್ಮವನ್ನು ಹುಡುಕುವುದು ನ್ಯಾಯೋಚಿತವಲ್ಲ. ನಮ್ಮ ಧಾರ್ಮಿಕ ನಾಯಕರು ಪ್ರತಿ ಶುಕ್ರವಾರ ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. (ಹಾಗಿದ್ದರೆ, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಹತ್ಯೆ ಹೇಗೆ ನಡೆಯುತ್ತಿದೆ? – ಸಂಪಾದಕರು)
ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಠಾಣೆಯ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು, ‘ವಿಟ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಮಸೀದಿಗಳಿಗೆ ಪೊಲೀಸರು ಭೇಟಿ ನೀಡುವುದಿಲ್ಲ’ ಎಂದು ಭರವಸೆ ನೀಡಿದರು.
ಸಂಪಾದಕೀಯ ನಿಲುವು
|
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!