‘ವೃಕ್ಷ ಮಾತೆ’ ಎಂದೇ ಖ್ಯಾತರಾಗಿದ್ದ ಸಾಲುಮರದ ತಿಮ್ಮಕ್ಕ ಅವರು ೧೧೪ ನೇ ವಯಸ್ಸಿನಲ್ಲಿ ನಿಧನ

ಬೆಂಗಳೂರು – ಪದ್ಮಶ್ರೀ ಪುರಸ್ಕೃತೆ ಹಾಗೂ ‘ವೃಕ್ಷ ಮಾತೆ’ ಎಂದೇ ಖ್ಯಾತರಾಗಿದ್ದ ಸಾಲುಮರದ ತಿಮ್ಮಕ್ಕ ಅವರು ನವೆಂಬರ್ ೧೪, ೨೦೨೫ ರಂದು ತಮ್ಮ ೧೧೪ ನೇ ವಯಸ್ಸಿನಲ್ಲಿ ನಿಧನರಾದರು. ನವೆಂಬರ್ ೨ ರಂದು ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು; ಆದರೆ ಚಿಕಿತ್ಸೆಯ ಸಮಯದಲ್ಲಿ ಶರೀರದ ಅನೇಕ ಅಂಗಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ ಕಾರಣ ಅವರು ನಿಧನರಾದರು.

ತಿಮ್ಮಕ್ಕ ಅವರು ತಮ್ಮ ಪರಿಸರ ಪ್ರೀತಿಗಾಗಿ ಜಗತ್ತಿನಾದ್ಯಂತ ಗುರುತಿಸಿಕೊಂಡಿದ್ದರು. ೧೯೫೦ ರ ದಶಕದಲ್ಲಿ ಅವರು ತಮ್ಮ ಪತಿ ಚಿಕ್ಕಯ್ಯ ಅವರೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ೫ ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ಸುಮಾರು ೪೦೦ ಆಲದ ಮರಗಳನ್ನು ನೆಟ್ಟು ಅನೇಕ ವರ್ಷಗಳ ಕಾಲ ಅವುಗಳನ್ನು ಪೋಷಿಸಿದ್ದರು. ಅವರಿಗೆ ಅನೇಕ ಪ್ರಶಸ್ತಿಗಳು ಸಂದಿವೆ.