
ಮುಂಬಯಿ – ಮಾಲ್ವಣಿ ನಂತರ ಈಗ ದಕ್ಷಿಣ ಮುಂಬಯಿನಲ್ಲಿಯೂ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರು ಪತ್ತೆಯಾಗಿದ್ದಾರೆ. ಗಿರ್ಗಾಂವ್ನಲ್ಲಿ ಒಬ್ಬ ತರಕಾರಿ ವ್ಯಾಪಾರಿಯಾಗಿರುವ ರೋಹಿಂಗ್ಯಾ ನುಸುಳುಕೋರ ಸ್ಥಳೀಯ ಮಹಿಳೆಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಇದರ ನಂತರ ಮುಂಬಯಿನ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಬೇಡಿಕೆ ಇಡುತ್ತಿದ್ದಾರೆ. ಈ ಪ್ರಕರಣದ ನಂತರ, ರಾಜ್ಯ ಕೌಶಲ್ಯ ಅಭಿವೃದ್ಧಿ ಸಚಿವರು ಮತ್ತು ಮುಂಬಯಿ ಉಪನಗರದ ಸಹ-ಪಾಲಕ ಸಚಿವರಾದ ಮಂಗಲ್ ಪ್ರಭಾತ ಲೋಧಾ ಅವರು ಮುಂಬಯಿ ಪೊಲೀಸ್ ಆಯುಕ್ತ ದೇವೇನ ಭಾರತಿ ಅವರನ್ನು ಭೇಟಿ ಮಾಡಿ, ನುಸುಳುಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.
ಗಿರ್ಗಾಂವ್ನಲ್ಲಿನ ನುಸುಳುಕೋರರ ಬಳಿ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ಈ ಎಲ್ಲಾ ಆಧಾರ್ ಕಾರ್ಡ್ಗಳಲ್ಲಿ ಒಂದೇ ರೀತಿಯ ಜನ್ಮ ದಿನಾಂಕ ಕಂಡುಬಂದಿದೆ. ಕೆಲವು ದಿನಗಳ ಹಿಂದೆ ಪಶ್ಚಿಮ ಮುಂಬಯಿ ಉಪನಗರದ ಮಾಲ್ವಣಿಯಲ್ಲಿರುವ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮುಂಬಯಿ ಮಹಾನಗರ ಪಾಲಿಕೆ ಆಡಳಿತದಿಂದ ಕ್ರಮ ಕೈಗೊಳ್ಳಲಾಗಿತ್ತು; ಆದರೂ ಮುಂಬಯಿನ ವಿವಿಧ ಭಾಗಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರು ಕಂಡುಬರುತ್ತಿದ್ದಾರೆ. ಈ ಕುರಿತು ಸಚಿವ ಮಂಗಲ್ ಪ್ರಭಾತ ಲೋಧಾ ಅವರು ಪೊಲೀಸ್ ಆಯುಕ್ತ ದೇವೇನ ಭಾರತಿ ಅವರಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ಮುಸ್ಲಿಮರ ನುಸುಳುವಿಕೆಗೆ ಶಾಸಕ ಅಸ್ಲಂ ಶೇಖ್ ಅವರ ಬೆಂಬಲ ! – ಮಂಗಲ್ ಪ್ರಭಾತ ಲೋಧಾ, ಕೌಶಲ್ಯ ಅಭಿವೃದ್ಧಿ ಸಚಿವ
ಹೀಗಾದರೆ, ನುಸುಳುಕೋರರಿಗೆ ಬೆಂಬಲ ನೀಡುವವರನ್ನು ದೇಶದ ಶತ್ರುಗಳು ಎಂದು ಘೋಷಿಸಿ, ಅವರ ಮೇಲೆಯೂ ಏಕೆ ಕ್ರಮ ಕೈಗೊಳ್ಳಲಾಗುತ್ತಿಲ್ಲ ? ಇದು ಜನರಿಗೆ ತಿಳಿಯಬೇಕು !
ಮಾಲ್ವಣಿಯಲ್ಲಿ ಕೆಡವಲಾದ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ಮುಸ್ಲಿಮರ ಕಟ್ಟಡವನ್ನು ಮತ್ತೆ ನಿರ್ಮಿಸಲು ಕಾಂಗ್ರೆಸ್ ಶಾಸಕ ಅಸ್ಲಂ ಶೇಖ್ ಅವರು ಅವರಿಗೆ ಸಹಾಯ ಮಾಡುತ್ತಿದ್ದಾರೆ. ಆಡಳಿತದಲ್ಲಿರುವ ಕೆಲವು ಹಿರಿಯ ಅಧಿಕಾರಿಗಳು ಸಹ ಇದಕ್ಕಾಗಿ ಅಸ್ಲಂ ಶೇಖ್ ಅವರಿಗೆ ಸಹಾಯ ಮಾಡುತ್ತಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ಪಡೆದು ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮಂಗಲ ಪ್ರಭಾತ ಲೋಧಾ ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ