
ಫಿರೋಜ್ಪುರ್ (ಪಂಜಾಬ್) – ಇಲ್ಲಿ ಆರ್ಎಸ್ಎಸ್ನ ಹಿರಿಯ ಕಾರ್ಯಕರ್ತ ಬಲದೇವ್ ರಾಜ್ ಅರೋರಾ ಅವರ ಪುತ್ರ ನವೀನ್ ಅರೋರಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ನವೀನ್ ಅವರಿಗೆ ಮೋಚಿ ಬಜಾರ್ನಲ್ಲಿ ಅಂಗಡಿಯಿತ್ತು. ಅವರು ಆ ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗುತ್ತಿದ್ದಾಗ, ಯುಕೋ ಬ್ಯಾಂಕ್ ಬಳಿ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರನ್ನು ತಡೆದು ಗುಂಡು ಹಾರಿಸಿದ್ದಾರೆ. ಗುಂಡು ನೇರವಾಗಿ ತಲೆಗೆ ತಗುಲಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದು ಉದ್ದೇಶಪೂರ್ವಕ ಹತ್ಯೆ ಎಂದು ಕಂಡುಬಂದಿದೆ. ಈ ಘಟನೆಯ ನಂತರ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
🚨 Ferozepur, Punjab: RSS leader’s son, Naveen Arora shot dead.
For years, leaders and karyakartas of pro-Hindutva organisations have been systematically targeted in Punjab – and successive governments, irrespective of party, have failed miserably to protect them.
How many more… pic.twitter.com/QZRnotMBuY
— Sanatan Prabhat (@SanatanPrabhat) November 16, 2025
ಭಾಜಪ ನಾಯಕರು ಕೂಡ ರಸ್ತೆಗೆ ಇಳಿದು ಸರಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಅಪರಾಧಿಗಳ ಧೈರ್ಯ ಹೆಚ್ಚಿದ್ದು, ಕಾನೂನಿನ ಜಾರಿ ದುರ್ಬಲಗೊಂಡಿದೆ ಎಂದು ಅವರು ಹೇಳಿದ್ದಾರೆ. ಪೊಲೀಸರು ನಗರಾದ್ಯಂತ ಕಟ್ಟೆಚ್ಚರ ಘೋಷಿಸಿ ದಿಗ್ಬಂಧನ ಹಾಕಿದ್ದಾರೆ. ಆರೋಪಿಗಳ ಪತ್ತೆಗಾಗಿ ಹಲವು ತಂಡಗಳು ಕಾರ್ಯನಿರ್ವಹಿಸುತ್ತಿವೆ.
ಸಂಪಾದಕೀಯ ನಿಲುವುಪಂಜಾಬ್ನಲ್ಲಿ ಕಳೆದ ಕೆಲವು ವರ್ಷಗಳಿಂದ ಹಿಂದುತ್ವನಿಷ್ಠ ಸಂಘಟನೆಗಳ ನಾಯಕರು, ಪದಾಧಿಕಾರಿಗಳು ಮತ್ತು ಹಿಂದುತ್ವನಿಷ್ಠರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ; ಆದರೆ ಅವರನ್ನು ರಕ್ಷಿಸುವಲ್ಲಿ ಸರ್ವಪಕ್ಷ ಸರಕಾರಗಳು ವಿಫಲವಾಗಿವೆ ಎಂಬುದು ನಾಚಿಕೆಗೇಡಿನ ಸಂಗತಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!