ವ್ಯವಸ್ಥಾಪಕ ಸಮಿತಿಯ ವಿರುದ್ಧ ದೂರು ದಾಖಲು!

ಸಂಭಲ್ (ಉತ್ತರ ಪ್ರದೇಶ) – ಇಲ್ಲಿನ ಜಾಮಾ (ಜಾಮಿಯಾ) ಮಸೀದಿಯ ವ್ಯವಸ್ಥಾಪಕ ಸಮಿತಿಯು ಇತ್ತೀಚೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎ.ಎಸ್.ಐ. – ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ) ತಂಡದೊಂದಿಗೆ ಅನುಚಿತವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಎ.ಎಸ್.ಐ. ತಂಡವು ನಡೆಸುತ್ತಿದ್ದ ಪರಿಶೀಲನೆಯನ್ನು ತಡೆಯುವ ಉದ್ದೇಶದಿಂದ ಸಮಿತಿಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮಸೀದಿ ಸಮಿತಿಯ ಸಿಬ್ಬಂದಿಯಾದ ಹಾಫೀಜ್ ಮತ್ತು ಮೊಹಮ್ಮದ್ ಕಾಸಿಫ್ ಖಾನ್ ಅವರು ಪುರಾತತ್ವ ತಂಡಕ್ಕೆ ಮಸೀದಿಯ ಮುಖ್ಯ ಗುಮ್ಮಟದೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದರು. ಈ ಕುರಿತು ಎ.ಎಸ್.ಐ.ಯ ಕಿರಿಯ ಇಂಜಿನಿಯರ್ ಅವರು ಸಂಭಲ್ ಸಾದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಅಲ್ಲದೇ, ಸಂಪೂರ್ಣ ಪ್ರಕರಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೂ ಲಿಖಿತ ರೂಪದಲ್ಲಿ ನೀಡಿದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಮಸೀದಿ ವ್ಯವಸ್ಥಾಪಕ ಸಮಿತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಪುರಾತತ್ವ ಇಲಾಖೆಯ ತಂಡಕ್ಕೆ ಮಸೀದಿಯೊಳಗೆ ಪ್ರವೇಶಿಸಲು ವಿರೋಧವಾಗುತ್ತಿರುವುದರಿಂದ, ಮಸೀದಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಯಾರಿಗಾದರೂ ಅನಿಸಿದರೆ, ಅದರಲ್ಲಿ ತಪ್ಪೇನಿದೆ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ