ಕಾಂಗ್ರೆಸ್ ಚುನಾವಣಾ ಆಯೋಗದ ಘನತೆಯನ್ನು ಹಾಳು ಮಾಡುತ್ತಿದೆ!

ಮತ ಕಳ್ಳತನದ ಆರೋಪ: ಚುನಾವಣಾ ಆಯೋಗದ ಮೇಲೆ ವಾಗ್ದಾಳಿ; ಮಾಜಿ ನಿವೃತ್ತ ನ್ಯಾಯಾಧೀಶರು, ಮಿಲಿಟರಿ ಮತ್ತು ಸರಕಾರಿ ಅಧಿಕಾರಿಗಳಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ಮೇಲೆ ಟೀಕಾಪ್ರಹಾರ

ನವದೆಹಲಿ – ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ನಿರಂತರವಾಗಿ ಕುಗ್ಗಿಸಲು ಪ್ರಯತ್ನಿಸುತ್ತಿದೆ, ಇದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅನಗತ್ಯ ಅಪನಂಬಿಕೆಯನ್ನು ಸೃಷ್ಟಿಸುತ್ತಿದೆ. ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಯ ಪ್ರಮುಖ ಆಧಾರಸ್ತಂಭವಾಗಿದ್ದು ಅದನ್ನು ಪ್ರಶ್ನಿಸುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಕಡಿಮೆಯಾಗುತ್ತದೆ, ಈ ನಿಟ್ಟಿನಲ್ಲಿ, ದೇಶಾದಲ್ಲಿನ ೨೭೨ ನಿವೃತ್ತ ನ್ಯಾಯಾಧೀಶರು, ನಿವೃತ್ತ ಸರಕಾರಿ ಅಧಿಕಾರಿಗಳು ಮತ್ತು ನಿವೃತ್ತ ಮಿಲಿಟರಿ ಅಧಿಕಾರಿಗಳು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಟೀಕೆಗಳನ್ನು ಒಳಗೊಂಡಿರುವ ಬಹಿರಂಗ ಪತ್ರವೊಂದನ್ನು ಪ್ರಸಾರ ಮಾಡಿದ್ದಾರೆ.

೧೬ ಮಾಜಿ ನ್ಯಾಯಾಧೀಶರು, ೧೨೩ ನಿವೃತ್ತ ಸರಕಾರಿ ಅಧಿಕಾರಿಗಳು (೧೪ ಮಾಜಿ ರಾಯಭಾರಿಗಳು ಸೇರಿದಂತೆ) ಮತ್ತು ೧೩೩ ನಿವೃತ್ತ ಮಿಲಿಟರಿ ಅಧಿಕಾರಿಗಳು ಸೇರಿ ಈ ಪಾತ್ರ ಬರೆದಿದ್ದಾರೆ. ಈವರೆಗೆ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ಮೇಲೆ ‘ಮತಗಳ ಕಳ್ಳತನದ’ ಆರೋಪ ಹೊರಿಸುವ ಮೂರು ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದಾರೆ. ಈ ಪತ್ರಿಕಾಗೋಷ್ಠಿಗಳಲ್ಲಿ ಅವರು ಚುನಾವಣಾ ಆಯೋಗವನ್ನು ಮೋದಿ ಸರಕಾರದ ‘ಬಿ-ಟೀಮ್’ (ಸಹಾಯಕ ಪಕ್ಷ) ಎಂದು ಹೇಳಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿವೆ; ಆದರೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪದೇ-ಪದೇ ಆರೋಪಗಳನ್ನು ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಈ ಪತ್ರದ ಮೂಲಕ ಹೇಳಲಾಗಿದೆ.