ಮತ ಕಳ್ಳತನದ ಆರೋಪ: ಚುನಾವಣಾ ಆಯೋಗದ ಮೇಲೆ ವಾಗ್ದಾಳಿ; ಮಾಜಿ ನಿವೃತ್ತ ನ್ಯಾಯಾಧೀಶರು, ಮಿಲಿಟರಿ ಮತ್ತು ಸರಕಾರಿ ಅಧಿಕಾರಿಗಳಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ಮೇಲೆ ಟೀಕಾಪ್ರಹಾರ

ನವದೆಹಲಿ – ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ನಿರಂತರವಾಗಿ ಕುಗ್ಗಿಸಲು ಪ್ರಯತ್ನಿಸುತ್ತಿದೆ, ಇದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅನಗತ್ಯ ಅಪನಂಬಿಕೆಯನ್ನು ಸೃಷ್ಟಿಸುತ್ತಿದೆ. ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಯ ಪ್ರಮುಖ ಆಧಾರಸ್ತಂಭವಾಗಿದ್ದು ಅದನ್ನು ಪ್ರಶ್ನಿಸುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಕಡಿಮೆಯಾಗುತ್ತದೆ, ಈ ನಿಟ್ಟಿನಲ್ಲಿ, ದೇಶಾದಲ್ಲಿನ ೨೭೨ ನಿವೃತ್ತ ನ್ಯಾಯಾಧೀಶರು, ನಿವೃತ್ತ ಸರಕಾರಿ ಅಧಿಕಾರಿಗಳು ಮತ್ತು ನಿವೃತ್ತ ಮಿಲಿಟರಿ ಅಧಿಕಾರಿಗಳು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಟೀಕೆಗಳನ್ನು ಒಳಗೊಂಡಿರುವ ಬಹಿರಂಗ ಪತ್ರವೊಂದನ್ನು ಪ್ರಸಾರ ಮಾಡಿದ್ದಾರೆ.
⚠️ 272 Eminent Voices Call Out Congress: After Targeting the Armed Forces, Judiciary & Parliament – Now the ECI
🇮🇳📜 A group of 272 distinguished Indians – including 16 Judges, 123 retired bureaucrats (14 Ambassadors), and 133 retired Armed Forces officers have issued a… pic.twitter.com/HaV7WWuaOC
— Sanatan Prabhat (@SanatanPrabhat) November 19, 2025
೧೬ ಮಾಜಿ ನ್ಯಾಯಾಧೀಶರು, ೧೨೩ ನಿವೃತ್ತ ಸರಕಾರಿ ಅಧಿಕಾರಿಗಳು (೧೪ ಮಾಜಿ ರಾಯಭಾರಿಗಳು ಸೇರಿದಂತೆ) ಮತ್ತು ೧೩೩ ನಿವೃತ್ತ ಮಿಲಿಟರಿ ಅಧಿಕಾರಿಗಳು ಸೇರಿ ಈ ಪಾತ್ರ ಬರೆದಿದ್ದಾರೆ. ಈವರೆಗೆ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ಮೇಲೆ ‘ಮತಗಳ ಕಳ್ಳತನದ’ ಆರೋಪ ಹೊರಿಸುವ ಮೂರು ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದಾರೆ. ಈ ಪತ್ರಿಕಾಗೋಷ್ಠಿಗಳಲ್ಲಿ ಅವರು ಚುನಾವಣಾ ಆಯೋಗವನ್ನು ಮೋದಿ ಸರಕಾರದ ‘ಬಿ-ಟೀಮ್’ (ಸಹಾಯಕ ಪಕ್ಷ) ಎಂದು ಹೇಳಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿವೆ; ಆದರೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪದೇ-ಪದೇ ಆರೋಪಗಳನ್ನು ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಈ ಪತ್ರದ ಮೂಲಕ ಹೇಳಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ