ಬಾರ್ ಗೆ ಅಡ್ಡಿ ಎಂದು ಹೇಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನೇ ಧ್ವಂಸ ಮಾಡಿದ ದಾರೂಳರು! : Karnataka Anjaneya Temple

ಬೆಂಗಳೂರಿನಲ್ಲಿ ಸಮಾಜಘಾತುಕರ ದುಷ್ಕೃತ್ಯ

ಈ ಮೇಲೆ ಪ್ರಕಾಶಿಸಿದ ಚಿತ್ರ ಯಾವುದೇ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿರುವುದಾಗಿರದೇ ನೈಜ ಸ್ಥಿತಿ ತಿಳಿಸುವುದಾಗಿದೆ – ಸಂಪಾದಕರು

ಬೆಂಗಳೂರು – ಮದ್ಯದ ಅಂಗಡಿ ನಿರ್ಮಾಣಕ್ಕೆ ಅಡ್ಡಿಯಾಗಿದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ಮಧ್ಯರಾತ್ರಿ ಜೆಸಿಬಿ ತಂದ ಸಮಾಜಘಾತುಕರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸಿದ ಘಟನೆ ನಡೆದಿದೆ.

ಕಳೆದ ಕೆಲವು ದಿನಗಳಿಂದ ಕೆಲವರು ಮದ್ಯದ ಅಂಗಡಿ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು; ಆದರೆ ಈ ಅಂಗಡಿಯನ್ನು ಯಾವ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು, ಅದರ ಸಮೀಪದಲ್ಲೇ ಈ ದೇವಸ್ಥಾನವಿದೆ. ಹಾಗಾಗಿ, ಅನುಮತಿ ನೀಡಬಾರದು ಎಂದು ದೇವಸ್ಥಾನ ಸಮಿತಿಯು ಅಬಕಾರಿ ಇಲಾಖೆಗೆ ಅರ್ಜಿ ಸಲ್ಲಿಸಿತ್ತು. ಇದೇ ಕಾರಣಕ್ಕಾಗಿ ದೇವಸ್ಥಾನವನ್ನು ನೆಲಸಮಗೊಳಿಸಲಾಗಿದ್ದು, ಬೆಳಗ್ಗೆ ಜನರು ದೇವಸ್ಥಾನ ಕೆಡವಿರುವುದನ್ನು ನೋಡಿದ್ದಾರೆ. ಈ ಬಗ್ಗೆ ಸ್ಥಳೀಯರು ನಂದಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಂಪಾದಕೀಯ ನಿಲುವು

  • ಇಂತಹವರಿಗೆ ಗಲ್ಲು ಶಿಕ್ಷೆಯೇ ಆಗಬೇಕು!
  • ಜೆಸಿಬಿ ತಂದು ದೇವಸ್ಥಾನ ಕೆಡವಿದರೂ ಯಾರಿಗೂ ಈ ಬಗ್ಗೆ ಮಾಹಿತಿ ಹೇಗೆ ಸಿಗಲಿಲ್ಲ?