|

ಮಂಗಳೂರು – ಭಾಜಪ ನಾಯಕ ಹಾಗೂ ಪ್ರಖರ ಹಿಂದುತ್ವನಿಷ್ಠ ಸುಖಾನಂದ ಶೆಟ್ಟಿ ಅವರ ಹತ್ಯೆ ಪ್ರಕರಣದಲ್ಲಿ ೧೯ ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ಅಬ್ದುಲ್ ಸಲಾಮ್ ಅದ್ದೂರು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈ ಮೊದಲು ೧೬ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ ೧೧ ಆರೋಪಿಗಳು ಪರಾರಿಯಾಗಿದ್ದಾರೆ.
ಡಿಸೆಂಬರ್ ೧, ೨೦೦೬ ರಂದು ಹೊಸಬೆಟ್ಟು ಬಳಿ ಕಬೀರ್ ಮತ್ತು ಆತನ ಸಹಚರರು ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿದ್ದರು. ಆರೋಪಿಗಳಿಗೆ ಕಬೀರ್ನ ಸಹೋದರರಾದ ಲತೀಫ್ ಅಲಿಯಾಸ್ ಅದ್ದೂರು ಲತೀಫ್ ಮತ್ತು ಅಬ್ದುಲ್ ಸಲಾಮ್ ಅದ್ದೂರು ಅವರು ಅದ್ದೂರು ಟಿಬೆಟ್ ಕಾಲೋನಿಯ ತಮ್ಮ ಮನೆಯಲ್ಲಿ ೨ ದಿನ ಆಶ್ರಯ ನೀಡಿದ್ದರು. ಹತ್ಯೆ ಮಾಡಿದ ನಂತರ ಅಬ್ದುಲ್ ಸಲಾಮ್ ಅದ್ದೂರು ೩ ತಿಂಗಳ ನಂತರ ದೇಶದಿಂದ ಪಲಾಯನ ಮಾಡಿದ್ದನು. ಇತ್ತೀಚೆಗೆ ಅವನು ಈ ಪ್ರದೇಶಕ್ಕೆ ಮರಳಿ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಸಹೋದರ ಲತೀಫ್ ಇನ್ನೂ ವಿದೇಶದಲ್ಲಿದ್ದಾನೆ.
ಸಂಪಾದಕೀಯ ನಿಲುವುಇಂದು ಹಿಂದುತ್ವನಿಷ್ಠರ ರಕ್ತ ಹರಿಸುವ ಮತಾಂಧರು ಜಗತ್ತಿನ ಯಾವುದೇ ಮೂಲೆಯಲ್ಲಿ ಅಡಗಿಕೊಂಡಿದ್ದರೂ, ಅವರನ್ನು ಬಂಧಿಸಿ ಶಿಕ್ಷೆ ನೀಡುವಂತಹ ಪೊಲೀಸರ ಅವಶ್ಯಕತೆ ಭಾರತಕ್ಕಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!