
(ಡಿಎಂಕೆ, ಅಂದರೆ ದ್ರಾವಿಡ ಮುನ್ನೇತ್ರ ಕಳಗಂ, ಅಂದರೆ ದ್ರಾವಿಡ ಪ್ರಗತಿ ಸಂಘ)
ಚೆನ್ನೈ (ತಮಿಳುನಾಡು) – ಸುಮಾರು ಎರಡು ವರ್ಷಗಳ ಹಿಂದೆ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆ ಎಂದು ಕರೆದಿದ್ದ ಡಿಎಂಕೆಯ ಕಟ್ಟರ ಹಿಂದೂ ದ್ವೇಷಿ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಈಗ ದೇವಭಾಷೆ ಸಂಸ್ಕೃತದ ಬಗ್ಗೆ ಟೀಕೆ ಮಾಡಿದ್ದಾರೆ. ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಂಸ್ಕೃತವನ್ನು ‘ಮೃತ’ ಎಂದು ಕರೆದರು. ಅವರು, ಕಳೆದ ೧೦ ವರ್ಷಗಳಲ್ಲಿ ಕೇಂದ್ರ ಸರಕಾರ ಸಂಸ್ಕೃತಕ್ಕಾಗಿ ೨,೪೦೦ ಕೋಟಿ ರೂಪಾಯಿ ನೀಡಿದರೆ, ತಮಿಳು ಭಾಷೆಗಾಗಿ ಕೇವಲ ೧೫೦ ಕೋಟಿ ರೂಪಾಯಿ ನೀಡಿದೆ ಎಂದು ಹೇಳಿದರು. ಮಕ್ಕಳು ತಮಿಳು ಕಲಿಯಲು ಉತ್ಸುಕರಾಗಿರುವಾಗ ಅವರ ಮೇಲೆ ಹಿಂದಿ ಮತ್ತು ಸಂಸ್ಕೃತ ಕಲಿಯಲು ಒತ್ತಡ ಏಕೆ ಹಾಕುತ್ತಿದ್ದೀರಿ ಎಂದು ಉದಯನಿಧಿ ಅವರು ಪ್ರಧಾನಮಂತ್ರಿ ಮೋದಿಯವರಿಗೆ ಪ್ರಶ್ನಿಸಿದರು. (ಈ ರೀತಿ ಭಾಷೆ ಮತ್ತು ಪ್ರದೇಶದ ಆಧಾರದ ಮೇಲೆ ಹಿಂದೂಗಳಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ ರಾಜಕೀಯ ನಾಯಕರ ಮೇಲೆ ರಾಷ್ಟ್ರದ್ರೋಹದ ಮೊಕದ್ದಮೆ ದಾಖಲಿಸಬೇಕು! – ಸಂಪಾದಕರು)
ಬಿಜೆಪಿಯಿಂದ ತೀವ್ರ ವಿರೋಧ!
ಸ್ಟಾಲಿನ್ ಅವರ ಹೇಳಿಕೆಗೆ ಬಿಜೆಪಿ ನಾಯಕಿ ಮತ್ತು ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸುಂದರರಾಜನ್ ಪ್ರತಿಕ್ರಿಯೆ ನೀಡಿದ್ದು, ಇತರ ಭಾಷೆಗಳನ್ನು ಕೀಳಾಗಿ ಕಾಣುವುದು ತಮಿಳು ಸಂಸ್ಕೃತಿಗೆ ಮಾನ್ಯವಿಲ್ಲ ಎಂದು ಹೇಳಿದರು. ನಾವು ನಮ್ಮ ಭಾಷೆಯನ್ನು ಪ್ರೀತಿಸಬೇಕು ಮತ್ತು ಇತರ ಭಾಷೆಗಳನ್ನು ಸಹ ಗೌರವಿಸಬೇಕು ಎಂದು ಕರೆ ನೀಡಿದರು.
ಸಂಪಾದಕೀಯ ನಿಲುವುಇಂತಹ ಹಿಂದೂ ದ್ವೇಷಿ ‘ಉದಯ’ನಿಧಿ ಸ್ಟಾಲಿನ್ ಅವರ ರಾಜಕೀಯ ‘ಅಸ್ತ’ ಮಾಡಲು ಈಗ ತಮಿಳುನಾಡಿನ ಹಿಂದೂ ಜನರು ಮುಂದೆ ಬರಬೇಕು! ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಉದಯನಿಧಿ ಮತ್ತು ಅವರ ಡಿಎಂಕೆ ಪಕ್ಷಕ್ಕೆ ಸೋಲುಣಿಸುವುದು ಆವಶ್ಯಕವಾಗಿದೆ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ