ಬೆಂಗಳೂರಿನ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್‌ಸ್ಟೆಬಲ್ ಬಂಧನ! Bangalore Robbery Case

ಬೆಂಗಳೂರು – ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣದಲ್ಲಿ ಒಬ್ಬ ಪೊಲೀಸನು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆ ನಂತರ ಪೊಲೀಸ್ ಕಾನ್‌ಸ್ಟೆಬಲ್‌ ಕೈಗೆ ಬೇಡಿಹಾಕಲಾಯಿತು. ನಗರದಲ್ಲಿ ಕೆಲವು ದಿನಗಳ ಹಿಂದೆ ೭ ಕೋಟಿ ರೂಪಾಯಿಗಳ ದರೋಡೆ ನಡೆದ ಘಟನೆ ದೊಡ್ಡ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಆ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೋಲಿಸರು ಆರೋಪಿಗಳಿಂದ ೭ ಕೋಟಿ ರೂಪಾಯಿಗಳ ಪೈಕಿ ಅಂದಾಜು ೫ ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಇದು ನಿಜಕ್ಕೂ ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಆಗಿದೆ! ಇಂತಹ ಪೊಲೀಸರಿಗೆ ಜೀವಾವಧಿ ಶಿಕ್ಷೆ ನೀಡಬೇಕು!