ನ್ಯಾಯಮೂರ್ತಿ ಸೂರ್ಯಕಾಂತ್ ಇಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ನವದೆಹಲಿ – ದೇಶದಲ್ಲಿ ಬಾಕಿ ಇರುವ ೫ ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಯ ಮುಂದಿರುವ ದೊಡ್ಡ ಸವಾಲಾಗಿದೆ. ಈ ಬಾಕಿ ಇರುವ ಪ್ರಕರಣಗಳನ್ನು ಗುರುತಿಸುವುದು ಮತ್ತು ವಿವಾದಗಳನ್ನು ಪರಿಹರಿಸಲು ಮಧ್ಯಸ್ಥಿಕೆಯನ್ನು ಉತ್ತೇಜಿಸುವುದು ಈ ಎರಡು ಪ್ರಮುಖ ಆದ್ಯತೆಗಳಾಗಿರುತ್ತವೆ ಎಂದು ನಾಳೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನ್ಯಾಯಮೂರ್ತಿ ಸೂರ್ಯಕಾಂತ ಅವರು ತಿಳಿಸಿದ್ದಾರೆ.
ನ್ಯಾಯಮೂರ್ತಿ ಸೂರ್ಯಕಾಂತ ಅವರು,
೧. ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ ೯೦ ಸಾವಿರಕ್ಕಿಂತ ಹೆಚ್ಚಾಗಿದೆ. ಇದು ಹೇಗೆ ಸಂಭವಿಸಿತು ಅಥವಾ ಯಾರು ಜವಾಬ್ದಾರರು ಎಂಬುದನ್ನು ನಾನು ತನಿಖೆ ಮಾಡುವುದಿಲ್ಲ.
೨. ಎರಡನೇ ವಿಷಯವೆಂದರೆ ಮಧ್ಯಸ್ಥಿಕೆ, ಇದು ವಿವಾದಗಳನ್ನು ಬಗೆಹರಿಸಲು ಇರುವ ಸುಲಭ ವಿಧಾನಗಳಲ್ಲಿ ಒಂದಾಗಿದೆ ಮತ್ತು ಮಧ್ಯಸ್ಥಿಕೆಯು ನಿಜವಾಗಿಯೂ ನಿರ್ಣಾಯಕ ಪಾತ್ರ ವಹಿಸಬಹುದು.
೩. ದೇಶದಲ್ಲಿ ಮಧ್ಯಸ್ಥಿಕೆ ಕುರಿತಾದ ಜಾಗೃತಿ ವೇಗವಾಗಿ ಹೆಚ್ಚುತ್ತಿದೆ. ಇತ್ತೀಚೆಗೆ ಭಾರತದ ದೊಡ್ಡ ಖಾಸಗಿ ಸಂಸ್ಥೆಗಳು, ಬ್ಯಾಂಕ್ಗಳು ಮತ್ತು ವಿಮಾ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ದೀರ್ಘಕಾಲದ ಮೊಕದ್ದಮೆಗಳಿಂದ ರಕ್ಷಿಸಲು ಮಧ್ಯಸ್ಥಿಕೆ ತರಬೇತಿಗಾಗಿ ವಿನಂತಿಸಿವೆ.
೪. ದೇಶಾದ್ಯಂತ ಇರುವ ಉಚ್ಚ ನ್ಯಾಯಾಲಯಗಳು ಮತ್ತು ಕಿರಿಯ ನ್ಯಾಯಾಲಯಗಳಿಂದ ಬಾಕಿ ಇರುವ ಮೊಕದ್ದಮೆಗಳ ಕುರಿತಾದ ವಿವರವಾದ ವರದಿಯನ್ನು ತರಿಸಿಕೊಳ್ಳಲಾಗುವುದು. ಸರ್ವೋಚ್ಚ ನ್ಯಾಯಾಲಯದ ದೊಡ್ಡ ಸಾಂವಿಧಾನಿಕ ಪೀಠದಿಂದ ಇತ್ಯರ್ಥಗೊಳ್ಳಲಿರುವ ಬಾಕಿ ಪ್ರಕರಣಗಳ ಬಗ್ಗೆ ಉಚ್ಚ ನ್ಯಾಯಾಲಯಗಳನ್ನು ಕೇಳಲಾಗುವುದು.
೫. ಕೃತಕ ಬುದ್ಧಿಮತ್ತೆ ಕುರಿತು ಎಚ್ಚರಿಕೆ ವಹಿಸಲು ಅದರ ದುಷ್ಪರಿಣಾಮಗಳು ಮತ್ತು ಪರಿಹಾರ ಕ್ರಮಗಳನ್ನು ಅರ್ಥಮಾಡಿಕೊಳ್ಳುವುದು ಅವಶ್ಯಕವಾಗಿದೆ. ಕೃತಕ ಬುದ್ಧಿಮತ್ತೆಯು ನ್ಯಾಯಾಂಗ ಸಂಸ್ಥೆಗಳಿಗೆ ಮಹತ್ವದ ಪರಿಹಾರಗಳನ್ನು ನೀಡಬಲ್ಲದು; ಆದರೆ ಅದರ ಅಪಾಯಗಳನ್ನು ಅರ್ಥಮಾಡಿಕೊಂಡ ನಂತರವೇ ಅದರ ಬಳಕೆಯನ್ನು ಹೆಚ್ಚಿಸಬೇಕು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !