
ನಾಗಪುರ – ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದರಿಂದ ಕು. ದಿವ್ಯಾ ಕೊಠಾರೆ (ವಯಸ್ಸು ೧೩) ಎಂಬ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಣಕಾಪುರದಲ್ಲಿರುವ ಜಯ ಭೋಲೆ ನಗರ ಪ್ರದೇಶದಲ್ಲಿ ನಡೆದಿದೆ. ಕು. ದಿವ್ಯಾ ೮ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ನಿಯಮಿತವಾಗಿ ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ನಂತಹ ಸಾಮಾಜಿಕ ಮಾಧ್ಯಮಗಳನ್ನು ಅತಿಯಾಗಿ ಬಳಸುತ್ತಿದ್ದ ಕಾರಣ ಪಾಠಗಳನ್ನು ನಿರ್ಲಕ್ಷಿಸುತ್ತಿದ್ದಳು. ಈ ಕಾರಣದಿಂದಾಗಿ ಆಕೆಯ ಕುಟುಂಬದವರು ‘ಮೊಬೈಲ್ ಬಳಕೆ ಕಡಿಮೆ ಮಾಡಿ ಅಧ್ಯಯನಕ್ಕೆ ಹೆಚ್ಚು ಗಮನ ನೀಡು’ ಎಂದು ನಿರಂತರವಾಗಿ ತಿಳಿಸಿ ಹೇಳುತ್ತಿದ್ದರು. ನವೆಂಬರ್ ೨೧ರಂದು, ಆಕೆಯ ಕುಟುಂಬದವರು ಅವಳಿಗೆ ಮೊಬೈಲ್ ಬಳಸಲು ಅವಕಾಶ ನೀಡದ ಕಾರಣ, ಅವಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಳು.
ಸಂಪಾದಕೀಯ ನಿಲುವುಬಾಲ್ಯದಿಂದಲೇ ತಂದೆ-ತಾಯಿ ಮಕ್ಕಳಿಗೆ ಧರ್ಮಶಿಕ್ಷಣ ನೀಡಿ ಸುಸಂಸ್ಕೃತರನ್ನಾಗಿ ಮಾಡಿದರೆ, ಇಂತಹ ಆತ್ಮಹತ್ಯೆಯ ಘಟನೆಗಳಿಗೆ ಕಡಿವಾಣ ಹಾಕಬಹುದು. ಇದಕ್ಕಾಗಿ ಮೊದಲು ಪೋಷಕರು ಧರ್ಮಶಿಕ್ಷಣ ಪಡೆದು ಸುಸಂಸ್ಕೃತರಾಗಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ