|

ಬೆಂಗಳೂರು – ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಂಪುಗಳ ನಡುವೆ ಶಾಸಕರ ರಾಜಕೀಯ ಕುದುರೆ ವ್ಯಾಪಾರ ಆರಂಭವಾಗಿದೆ. ಇದರಲ್ಲಿ, ಕಾಂಗ್ರೆಸ್ನ ಆಂತರಿಕ ಎರಡೂ ಗುಂಪುಗಳು ಶಾಸಕರ ಖರೀದಿಗೆ ₹ 50 ಕೋಟಿ, ಒಂದು ‘ಫಾರ್ಚೂನರ್’ ಮತ್ತು ಒಂದು ಫ್ಲಾಟ್ನ ಆಮಿಷ ಒಡ್ಡುತ್ತಿವೆ. ಕೆಲವು ಶಾಸಕರು ₹ 75 ರಿಂದ ₹ 100 ಕೋಟಿಗಳ ಬೇಡಿಕೆಯನ್ನೂ ಇಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಶಾಸಕರಿಗೆ ಸಚಿವ ಸ್ಥಾನ ಬೇಕಿದ್ದರೆ, ಅವರಿಂದ ₹ 200 ಕೋಟಿಗಳ ಬೇಡಿಕೆ ಇಡಲಾಗುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರು ಮತ್ತು ಭಾಜಪ ಶಾಸಕರಾದ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಗಂಭೀರ ಆರೋಪವನ್ನು ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರನ್ನು ಬಂಧಿಸಿ! – ಶಾಸಕ ನಾರಾಯಣಸ್ವಾಮಿ

ಸಚಿವ ಸ್ಥಾನ ಬೇಕಿರುವ ಶಾಸಕರಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೇ ಖುದ್ದಾಗಿ ₹ 200 ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಶಾಸಕ ನಾರಾಯಣಸ್ವಾಮಿ ಹೇಳಿದ್ದಾರೆ. ಭ್ರಷ್ಟಾಚಾರ ಮತ್ತು ಆರ್ಥಿಕ ಅವ್ಯವಹಾರದ ಕುರಿತು ತಕ್ಷಣ ತನಿಖೆ ನಡೆಸಿ ಸುರ್ಜೇವಾಲಾ ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಜಾರಿ ನಿರ್ದೇಶನಾಲಯಕ್ಕೂ ಪತ್ರ ಬರೆಯುವುದಾಗಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ಸರಕಾರವು ಜನರ ಹಣವನ್ನು ಲೂಟಿ ಮಾಡಿ ಶಾಸಕರ ಖರೀದಿಯ ಆಟವಾಡುತ್ತಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು, ಜನರೇ ಈ ಉದ್ಧಟತನಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಸಂಪಾದಕೀಯ ನಿಲುವುಕಾಂಗ್ರೆಸ್ನ ಭ್ರಷ್ಟಾಚಾರದ ಕರಾಳ ಇತಿಹಾಸವನ್ನು ನೋಡಿದರೆ, ಈ ಆರೋಪಗಳಲ್ಲಿ ಸತ್ಯಾಂಶವಿರುವ ಸಾಧ್ಯತೆಯನ್ನು ಯಾರು ತಳ್ಳಿಹಾಕಿಯಾರು? ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಕಾಂಗ್ರೆಸ್ ಅನ್ನು ನಿಷೇಧಿಸುವುದು ಒಂದೇ ಪರಿಹಾರವಾಗಿದೆ! |
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !