ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಮಾಹಿತಿ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಪ್ರಕರಣದ ನಿರ್ಧಾರ ಪಕ್ಷದ ‘ಹೈಕಮಾಂಡ್’ (ಸರ್ವೋಚ್ಚ ನಾಯಕತ್ವ) ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. “ನಾನು ಈ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ” ಎಂದಿದ್ದಾರೆ.
ನವೆಂಬರ್ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ನಂತರ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಖರ್ಗೆ ಹೇಳಿಕೆ ಪ್ರಕಾರ, ಏನೇ ಆದರೂ, ಅದನ್ನು ‘ಹೈಕಮಾಂಡ್’ ಮಾಡುತ್ತದೆ. ನಿಮಗೆ ಚಿಂತಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಮತ್ತೊಂದೆಡೆ ಸಿದ್ದರಾಮಯ್ಯ ಮಾತನಾಡಿ, ನಾನು ‘ಹೈಕಮಾಂಡ್’ ನಿರ್ಧಾರವನ್ನು ಪಾಲಿಸುತ್ತೇನೆ. ಎಲ್ಲರೂ ಅದನ್ನೇ ಮಾಡಬೇಕು, ಎಂದು ಹೇಳಿದ್ದಾರೆ. ಆದಾಗ್ಯೂ ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾದರೆ, ತಾನು ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿರುವುದಾಗಿ ಹೇಳಿದ್ದಾರೆ.
ಭಾಜಪದಿಂದ ತಿರುಗೇಟು !
ಈ ಹೇಳಿಕೆಯಿಂದ ಭಾಜಪ ಶಾಸಕ ಸುರೇಶ್ ಕುಮಾರ್ ಅವರು ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ‘ಹೈಕಮಾಂಡ್’ ಅಲ್ಲದಿದ್ದರೆ, ನಿಜವಾಗಿ ‘ಹೈಕಮಾಂಡ್’ ಯಾರು?” ಎಂದು ಪ್ರಶ್ನಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ