ಕೇರಳ ಉಚ್ಚ ನ್ಯಾಯಾಲಯದ ತೀರ್ಪು

ತಿರುವನಂತಪುರಂ (ಕೇರಳ) – ಪತ್ನಿಯ ಆದಾಯವು ಸ್ಥಿರವಾಗಿಲ್ಲದಿದ್ದರೆ ಅಥವಾ ಆಕೆ ತನ್ನ ಖರ್ಚುಗಳನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ, ಆಕೆಯ ಜೀವನಾಂಶ ಪಡೆಯುವ ಹಕ್ಕು ಹಾಗೆಯೇ ಉಳಿಯುತ್ತದೆ. ಆಕೆಯನ್ನು ಈ ಹಕ್ಕಿನಿಂದ ವಂಚಿತಗೊಳಿಸುವಂತಿಲ್ಲ ಎಂದು ಕೇರಳ ಉಚ್ಚ ನ್ಯಾಯಾಲಯವು ವಿಚ್ಛೇದನದ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಕೌಸರ್ ಎಡಪ್ಪಗಾಥ ಅವರು ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಉಲ್ಲೇಖಿಸಿ ಈ ತೀರ್ಪನ್ನು ಪ್ರಕಟಿಸಿದರು. ನ್ಯಾಯಮೂರ್ತಿಗಳು, ಗಳಿಸುವ ಸಾಮರ್ಥ್ಯ ಮತ್ತು ವಾಸ್ತವವಾಗಿ ಸಾಕಷ್ಟು ಆದಾಯವನ್ನು ಗಳಿಸುವುದು, ಇವೆರಡರ ನಡುವೆ ವ್ಯತ್ಯಾಸವಿದೆ. ಎಂದು ಹೇಳಿದರು.
ಯಾವ ಪ್ರಕರಣ?
ಮಹಿಳೆಯು, ತನಗೆ ಹೊಲಿಗೆ ಕೆಲಸ ಗೊತ್ತಿದೆ, ಆದರೆ ತನಗೆ ಶಾಶ್ವತ ಕೆಲಸವಿಲ್ಲ ಮತ್ತು ಆದಾಯವೂ ಸಾಕಷ್ಟು ಇಲ್ಲ. ಆಕೆ ತನ್ನ ಪತಿಯ ಮೇಲೆ ಮಾನಸಿಕ ಮತ್ತು ದೈಹಿಕ ದೌರ್ಜನ್ಯದ ಆರೋಪ ಮಾಡಿದ್ದರು. ಇಬ್ಬರೂ ಬೇರೆಯಾದ ನಂತರ ಮಕ್ಕಳು ಮಹಿಳೆಯೊಂದಿಗೆ ವಾಸಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಮಹಿಳೆಯು ತನಗೆ ಹಾಗೂ ತನ್ನ ಮಕ್ಕಳಿಗೆ ಜೀವನಾಂಶಕ್ಕಾಗಿ ಬೇಡಿಕೆ ಸಲ್ಲಿಸಿದ್ದರು. ಆಕೆಯ ಪತಿಯು ಒಬ್ಬ ದರ್ಜಿ ಆಗಿದ್ದು, ಆತ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲು ಸಾಕಾಗುವಷ್ಟು ಸಂಪಾದಿಸುತ್ತಾನೆ. ಮಹಿಳೆಯು ತನ್ನ ಪತಿಯಿಂದ ತನಗಾಗಿ ಪ್ರತಿ ತಿಂಗಳು 15 ಸಾವಿರ ರೂಪಾಯಿ ಹಾಗೂ ಇಬ್ಬರು ಮಕ್ಕಳಿಗಾಗಿ ತಲಾ ಪ್ರತಿ ತಿಂಗಳು 10 ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ