ರಾವಲ್ಪಿಂಡಿ (ಪಾಕಿಸ್ತಾನ): ಆದಿಯಾಲಾ ಜೈಲು ಆಡಳಿತದಿಂದ ಮಾಹಿತಿ

ರಾವಲ್ಪಿಂಡಿ (ಪಾಕಿಸ್ತಾನ) – ಆದಿಯಾಲಾ ಜೈಲಿನಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ವದಂತಿಗಳಿಂದಾಗಿ, ನವೆಂಬರ್ 26 ರಂದು ಖಾನ್ ಅವರ ಪಕ್ಷದ ಸಾವಿರಾರು ಕಾರ್ಯಕರ್ತರು ಜೈಲಿನ ಹೊರಗೆ ಜಮಾಯಿಸಿದ್ದರು. ಜೈಲು ಆಡಳಿತ ಅಥವಾ ಸರಕಾರ ಇಮ್ರಾನ್ ಖಾನ್ ಅವರ ಕುರಿತು ಯಾವುದೇ ಮಾಹಿತಿ ನೀಡಲಿಲ್ಲ. ಇದರಿಂದಾಗಿ ರಾವಲ್ಪಿಂಡಿಯಲ್ಲಿ ದೊಡ್ಡ ಮಟ್ಟದ ಉದ್ವಿಗ್ನತೆ ಉಂಟಾಗಿತ್ತು. ಜೈಲು ಆಡಳಿತವು ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ, ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಆರೋಗ್ಯ ಉತ್ತಮವಾಗಿದೆ ಮತ್ತು ಅವರು ಜೈಲಿನಲ್ಲೇ ಇದ್ದಾರೆ ಎಂದು ತಿಳಿಸಿದೆ.
1. ಜೈಲು ಆಡಳಿತವು , ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತಾದ ಸುದ್ದಿ ನಿರಾಧಾರವಾಗಿದೆ ಮತ್ತು ಅವರಿಗೆ ಎಲ್ಲಾ ರೀತಿಯ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದಿದೆ. ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಇಮ್ರಾನ್ ಖಾನ್ ಅವರನ್ನು ಆದಿಯಾಲಾ ಜೈಲಿನಿಂದ ಬೇರೆಲ್ಲೂ ಸ್ಥಳಾಂತರಿಸಿಲ್ಲ ಎಂದು ತಿಳಿಸಿದೆ.
2. ಇಮ್ರಾನ್ ಅವರಿಗೆ ಹಿಂದೆಂದೂ ಜೈಲಿನಲ್ಲಿ ಸಿಗದಂತಹ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಹೇಳಿದ್ದಾರೆ.
3. ಇಮ್ರಾನ್ ಖಾನ್ ಅವರು ಭ್ರಷ್ಟಾಚಾರದ ಆರೋಪಗಳಿಂದಾಗಿ ಕಳೆದ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers